ರಾಜ್ಯ

ಶಕ್ತಿ ಯೋಜನೆ ದುರುಪಯೋಗ ಮಾಡಿಕೊಂಡ್ರೆ ಕಂಡಕ್ಟರ್ ಗಳ ಮೇಲೆ ಕಠಿಣ ಕ್ರಮ

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್‌ ಗಳು ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು ಜೊತೆಗೆ ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈಗಾಗಿ ಕೆಎಸ್​ಆರ್​ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು ಕಂಡಕ್ಟರ್‌ ಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.  ಬಸ್​ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆ ಮಾಡಿದ್ದಲ್ಲೆ ಆದಲ್ಲಿ ಕಠಿಣವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ನಿಂಗ್‌ ಕೊಟ್ಟಿದ್ದಾರೆ.

ಅಲ್ಲದೆ ತಪ್ಪಿತಸ್ಥ ಕಂಡಕ್ಟರ್ ​​​ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಲಾಗುತ್ತದೆ ಎಂಬುವುರ ಬಗ್ಗೆ ಆದೇಶ ಹೊರಡಿಸಿದ್ದಾರೆ.

೧) ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಶಿಸ್ತು ಕ್ರಮ

೨) 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ

೩) ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ

೪) 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ

೫) ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago