ಬೆಂಗಳೂರು: ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಮತ ಪಡೆಯುವುದಕ್ಕಾಗಿ ಮಾಡಿದ್ದಲ್ಲ. ಇದನ್ನು ಲೋಕಸಭಾ ಚುನಾವಣೆ ವರೆಗೆ ಎಂದು ನಿಗದಿ ಮಾಡಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಿಲ್ಲಲಿದೆ ಎಂಬ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ.
ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…