ರಾಜ್ಯ

ಶಕ್ತಿ ಯೋಜನೆ: 500ನೇ ಕೋಟಿಯ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು.

ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್‌ ಆಗಿ ಟಿಕೆಟ್‌ ಹರಿದ ಸಿದ್ದರಾಮಯ್ಯ ಅವರು 500ನೇ ಕೋಟಿಯ ಟಿಕೆಟ್‌ ನೀಡಿದ್ದಾರೆ.

ಟಿಕೆಟ್‌ ವಿತರಿಸುವ ಮೂಲಕ ಶಕ್ತಿ ಯೋಜನೆಯ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.

ಕುಮಾರಪಾರ್ಕ್‌ ಈಸ್ಟ್‌ ಬಳಿಯ ವಿಂಡ್ಸರ್‌ ವೃತ್ತದ ಬಳಿ ಕಾರ್ಯಕ್ರಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ.20ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್.11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

1 hour ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

6 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

6 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

6 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

6 hours ago