ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಬೇಕಿದ್ದ ಹಣವನ್ನು ಲಪಟಾಯಿಸಿದ ಆರೋಪದಲ್ಲಿ ಐವರು ಬಸ್ ಕಂಡಕ್ಟರ್ಗಳನ್ನು ಅಮಾನತು ಮಾಡಲಾಗಿದೆ.
ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಈ ವಂಚನೆ ಬಯಲಾಗಿದ್ದು, ಒಟ್ಟು 1,82,568 ರೂಪಾಯಿ ವಂಚನೆಯಾಗಿರುವುದು ಪತ್ತೆಯಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರು ಡಿಪೋದ ಕಂಡಕ್ಟರ್ ಸೂರ್ಯನಾರಾಯಣ, ಬೊಮ್ಮಲಿಂಗೇಶ್, ಬ್ರಿಜೇಶ್ ಬಾಬು,ಮೋಹನ್,ಎನ್. ಪ್ರಕಾಶ್ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡವರು.
ಈ ಕಂಡಕ್ಟರ್ಗಳು ಶಕ್ತಿ ಯೋಜನೆಯ ಉಚಿತ ಟಿಕೆಟ್ಗಳನ್ನು ಪುರುಷರಿಗೂ ಕೊಟ್ಟು ಹಣ ಪಡೆದು, ಅದನ್ನು ತಮ್ಮ ವೈಯಕ್ತಿಕ ಯುಪಿಐ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ತನಿಖೆ ವೇಳೆ ಅವರ ಬ್ಯಾಂಕ್ ಖಾತೆಗಳಲ್ಲಿ ಸಾವಿರಾರು ರೂಪಾಯಿ ಹಣ ಇರುವುದು ಕಂಡುಬಂದಿದೆ. ಬಿಎಂಟಿಸಿ ಈಗಾಗಲೇ ಐವರ ವಿರುದ್ಧ ಅಮಾನತು ಆದೇಶ ಹೊರಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದಕ್ಕೂ ಮುಂಚೆಯೂ ಇದೇ ರೀತಿಯ ವಂಚನೆಗೆ ಸಂಬಂಧಿಸಿ ಕೆಲವು ಕಂಡಕ್ಟರ್ಗಳನ್ನು ಅಮಾನತುಗೊಳಿಸಲಾಗಿತ್ತು.
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…