ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಬೇಕಿದ್ದ ಹಣವನ್ನು ಲಪಟಾಯಿಸಿದ ಆರೋಪದಲ್ಲಿ ಐವರು ಬಸ್ ಕಂಡಕ್ಟರ್ಗಳನ್ನು ಅಮಾನತು ಮಾಡಲಾಗಿದೆ.
ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳ ತಪಾಸಣೆ ವೇಳೆ ಈ ವಂಚನೆ ಬಯಲಾಗಿದ್ದು, ಒಟ್ಟು 1,82,568 ರೂಪಾಯಿ ವಂಚನೆಯಾಗಿರುವುದು ಪತ್ತೆಯಾಗಿದೆ. ಕನ್ನಡ ಓದಲು ಬಾರದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ವಂಚನೆ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರು ಡಿಪೋದ ಕಂಡಕ್ಟರ್ ಸೂರ್ಯನಾರಾಯಣ, ಬೊಮ್ಮಲಿಂಗೇಶ್, ಬ್ರಿಜೇಶ್ ಬಾಬು,ಮೋಹನ್,ಎನ್. ಪ್ರಕಾಶ್ ವಂಚನೆ ಪ್ರಕರಣದಲ್ಲಿ ಅಮಾನತುಗೊಂಡವರು.
ಈ ಕಂಡಕ್ಟರ್ಗಳು ಶಕ್ತಿ ಯೋಜನೆಯ ಉಚಿತ ಟಿಕೆಟ್ಗಳನ್ನು ಪುರುಷರಿಗೂ ಕೊಟ್ಟು ಹಣ ಪಡೆದು, ಅದನ್ನು ತಮ್ಮ ವೈಯಕ್ತಿಕ ಯುಪಿಐ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ತನಿಖೆ ವೇಳೆ ಅವರ ಬ್ಯಾಂಕ್ ಖಾತೆಗಳಲ್ಲಿ ಸಾವಿರಾರು ರೂಪಾಯಿ ಹಣ ಇರುವುದು ಕಂಡುಬಂದಿದೆ. ಬಿಎಂಟಿಸಿ ಈಗಾಗಲೇ ಐವರ ವಿರುದ್ಧ ಅಮಾನತು ಆದೇಶ ಹೊರಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದಕ್ಕೂ ಮುಂಚೆಯೂ ಇದೇ ರೀತಿಯ ವಂಚನೆಗೆ ಸಂಬಂಧಿಸಿ ಕೆಲವು ಕಂಡಕ್ಟರ್ಗಳನ್ನು ಅಮಾನತುಗೊಳಿಸಲಾಗಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…