ರಾಜ್ಯ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ(ಜು.26)ನಡೆದ ಸಚಿವ ಸಂಪುಟ ಸಭೆಯಲ್ಲಿ ರಜನೀಶ್‌ ಗೋಯಲ್‌ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಪತ್ನಿ, ಹಿರಿಯ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪ್ರಸ್ತುತ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಅವರ ಅಧಿಕಾರವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಅವರ ಪತ್ನಿ, ಹಿರಿಯ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಆಗಸ್ಟ್‌ 1 ರಂದು ಶಾಲಿನಿ ರಜನೀಶ್‌ ಅವರು ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಆದ ಶಾಲಿನಿ ಅವರ ಸೇವಾವಧಿ 2027ರ ಜೂನ್‌ 30ರ ವರೆಗೆ ಇರಲಿದ್ದು, ಮೂರು ವರ್ಷಗಳ ಕಾಲ ದೀರ್ಘಾವಧಿ ಸೇವೆಯಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ರಾಜ್ಯದ ಉನ್ನತ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡಿದ 2ನೇ ದಂಪತಿ ಎಂಬ ಹೆಗ್ಗಳಿಗೆ ಶಾಲಿನಿ ರಜನೀಶ್‌ ಮತ್ತು ರಜನೀಶ್‌ ಗೋಯಲ್‌ ಅವರದ್ದಾಗಲಿದೆ.

ಈ ಹಿಂದೆ 2000 ಇಸವಿಯಲ್ಲಿ ಬಿ.ಕೆ ಭಟ್ಟಾಚಾರ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2000 ಇಸವಿಯ ಜನವರಿ 1 ರಿಂದ 2002ರ ಅವಧಿಯಲ್ಲಿ ಅವರ ಪತ್ನಿ ತೆರೆಸಾ ಭಟ್ಟಾಚಾರ್ಯ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಈ ಮೂಲಕ ಕರ್ನಾಟಕದ ಸಿಎಸ್ ಆಗಿ ಸೇವೆ ಸಲ್ಲಿಸಿದ ಮೊಟ್ಟ ಮೊದಲ ದಂಪತಿಯಾಗಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

16 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

16 hours ago