ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್ಸಿ ʼಹಳ್ಳಿ ಹಕ್ಕಿʼ ಹೆಚ್.ವಿಶ್ವನಾಥ್ ಏಕವಚನದಲ್ಲೇ ಗುಡುಗಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದಾರೆ. ಜೀವನದುದ್ದಕ್ಕೂ ಕಾಂಗ್ರೆಸ್ನಿಂದ ಸಹಾಯ ಪಡೆದುಕೊಂಡು ಬಂದಿದ್ದಾರೆ. ಶಾಮನೂರು ಶಿವಶಂಕರಪ್ಪ ಎಂದು ಜಗತ್ತಿಗೆ ತೋರಿಸಿದವರು ದೇವರಾಜ ಅರಸು. ಅವರನ್ನು ಒಂದು ದಿನವಾದರೂ ನೆನಿತಾನ ಇವನು ಎಂದರು.
ಆತನ ಸಂಪೂರ್ಣ ಬೆಳವಣಿಗೆಗೆ ದೇವರಾಜ ಅರಸು ಕಾರಣ. ನಾವಾದರು ಅರಸು ಅವರನ್ನು ನೆನೆಯುತ್ತೇವೆ ಆದರೆ ಅವರೆಂದು ನೆನೆಯುವುದಿಲ್ಲ. ಕೃತಜ್ಞತೆಯೇ ಇಲ್ಲದವರು. ಚೆನ್ನಾಗಿ ದುಡ್ಡು ಮಾಡಿದ್ದಾನೆ. ಯಾರನ್ನ ಬೇಕಾದರೂ ಕೊಂಡುಕೊಳ್ಳುತ್ತೇನೆ ಎನ್ನುತ್ತಾನೆ ಎಂದು ಶಾಮನೂರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅವನಿಲ್ಲದಿದ್ದರೆ ಪಕ್ಷ ನಡೆಯಲ್ವೇ? ಪಕ್ಷ ನಡೆಯುವುದು ಜನರಿಂದ ಎಂದು ಹೇಳಿದರು.
ನಮ್ಮವರಿಗೂ ಬುದ್ದಿ ಇಲ್ಲ : ನಮ್ಮ ಯಾವುದೇ ಮುಖ್ಯಮಂತ್ರಿಗಳಾಗಲಿ, ಮಂತ್ರಿಗಳಾಗಲಿ ದಾವಣಗೆರೆಗೆ ಹೋದರೆ ಅವರ ಗೆಸ್ಟ್ಹೌಸ್ನಲ್ಲೇ ಮಲಗುತ್ತಾರೆ. ಅವನ ಮನಗೆ ಉಣ್ಣಲಿಕ್ಕೆ ಹೋಗುತ್ತಾರೆ. ಯಾರಾದರು ಕಾರ್ಯಕರ್ತರ ಮನೆಗೆ ಹೋಗಿ ಅಂಥಾ ನಾನು ಬಹಳಾ ಸತಿ ಹೇಳೀದ್ದೇನೆ. ನೀವೆಲ್ಲಾ ಅವನ ಮನಗೆ ಹೋದರೆ ನಿಮಗೆ ತಿರುಗಿಸಿ ಮಾತನಾಡುತ್ತಾನೆ. ನಮ್ಮ ಕಾಂಗ್ರೆಸ್ ಪಕ್ಷದ ಬಂಡೆ ಡಿಕೆಶಿ ನಿಜವಾದ ಬಂಡೆಯಾಗಿದ್ದರೆ, ಪಕ್ಷದಿಂದ ಅವನನ್ನು ಹೊರಗೆಹಾಕಿ ಎಂದು ಹೆಚ್.ವಿಶ್ವನಾಥ್ ಸವಾಲು ಹಾಕಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…