ರಾಜ್ಯ

ಕಾಂಗ್ರೆಸ್‌ ಜೀವಂತವಾಗಿದ್ದರೇ ಶಾಮನೂರು ಶಿವಶಂಕರಪ್ಪನನ್ನು ಸಸ್ಪೆಂಡ್‌ ಮಾಡಿ ಪಕ್ಷದಿಂದ ಹೊರಗೆಹಾಕಿ : ಹೆಚ್‌.ವಿಶ್ವನಾಥ್‌ !

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್‌ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್‌ಸಿ ʼಹಳ್ಳಿ ಹಕ್ಕಿʼ ಹೆಚ್‌.ವಿಶ್ವನಾಥ್‌ ಏಕವಚನದಲ್ಲೇ ಗುಡುಗಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್‌ ಪಕ್ಷದಿಂದ ಗೆದ್ದಿದ್ದಾರೆ. ಜೀವನದುದ್ದಕ್ಕೂ ಕಾಂಗ್ರೆಸ್‌ನಿಂದ ಸಹಾಯ ಪಡೆದುಕೊಂಡು ಬಂದಿದ್ದಾರೆ. ಶಾಮನೂರು ಶಿವಶಂಕರಪ್ಪ ಎಂದು ಜಗತ್ತಿಗೆ ತೋರಿಸಿದವರು ದೇವರಾಜ ಅರಸು. ಅವರನ್ನು ಒಂದು ದಿನವಾದರೂ ನೆನಿತಾನ ಇವನು ಎಂದರು.

ಆತನ ಸಂಪೂರ್ಣ ಬೆಳವಣಿಗೆಗೆ ದೇವರಾಜ ಅರಸು ಕಾರಣ. ನಾವಾದರು ಅರಸು ಅವರನ್ನು ನೆನೆಯುತ್ತೇವೆ ಆದರೆ ಅವರೆಂದು ನೆನೆಯುವುದಿಲ್ಲ. ಕೃತಜ್ಞತೆಯೇ ಇಲ್ಲದವರು. ಚೆನ್ನಾಗಿ ದುಡ್ಡು ಮಾಡಿದ್ದಾನೆ. ಯಾರನ್ನ ಬೇಕಾದರೂ ಕೊಂಡುಕೊಳ್ಳುತ್ತೇನೆ ಎನ್ನುತ್ತಾನೆ ಎಂದು ಶಾಮನೂರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅವನಿಲ್ಲದಿದ್ದರೆ ಪಕ್ಷ ನಡೆಯಲ್ವೇ? ಪಕ್ಷ ನಡೆಯುವುದು ಜನರಿಂದ ಎಂದು ಹೇಳಿದರು.

ನಮ್ಮವರಿಗೂ ಬುದ್ದಿ ಇಲ್ಲ : ನಮ್ಮ ಯಾವುದೇ ಮುಖ್ಯಮಂತ್ರಿಗಳಾಗಲಿ, ಮಂತ್ರಿಗಳಾಗಲಿ ದಾವಣಗೆರೆಗೆ ಹೋದರೆ ಅವರ ಗೆಸ್ಟ್‌ಹೌಸ್‌ನಲ್ಲೇ ಮಲಗುತ್ತಾರೆ. ಅವನ ಮನಗೆ ಉಣ್ಣಲಿಕ್ಕೆ ಹೋಗುತ್ತಾರೆ. ಯಾರಾದರು ಕಾರ್ಯಕರ್ತರ ಮನೆಗೆ ಹೋಗಿ ಅಂಥಾ ನಾನು ಬಹಳಾ ಸತಿ ಹೇಳೀದ್ದೇನೆ. ನೀವೆಲ್ಲಾ ಅವನ ಮನಗೆ ಹೋದರೆ ನಿಮಗೆ ತಿರುಗಿಸಿ ಮಾತನಾಡುತ್ತಾನೆ. ನಮ್ಮ ಕಾಂಗ್ರೆಸ್‌ ಪಕ್ಷದ ಬಂಡೆ ಡಿಕೆಶಿ ನಿಜವಾದ ಬಂಡೆಯಾಗಿದ್ದರೆ, ಪಕ್ಷದಿಂದ ಅವನನ್ನು ಹೊರಗೆಹಾಕಿ ಎಂದು ಹೆಚ್‌.ವಿಶ್ವನಾಥ್‌ ಸವಾಲು ಹಾಕಿದ್ದಾರೆ.

andolanait

Recent Posts

ಚಾಮರಾಜನಗರ: ಹುಲಿ ದಾಳಿಗೆ 3 ಮೇಕೆಗಳು ಬಲಿ

ಪ್ರಸಾದ್‌ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು  ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3…

20 mins ago

ಇರಾನ್‌ ಮೇಲೆ ಅಮೇರಿಕಾ ವಾಯುದಾಳಿ: ರೇಡಾರ್‌ ಕೇಂದ್ರಗಳು ಧ್ವಂಸ

ವಾಷಿಂಗ್ಟನ್:‌ ಅಮೇರಿಕಾ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್‌ ಮತ್ತು ಡ್ರೋನ್‌ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್‌…

25 mins ago

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…

1 hour ago

ಮೋದಿ ಮಿತವ್ಯಯ ಕರೆ ಎಫೆಕ್ಟ್:‌ ಚಿನ್ನ ಆಮದು 70% ಇಳಿಕೆ

ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.…

1 hour ago

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

6 hours ago