ರಾಜ್ಯ

‌ಶಾಮನೂರು | ಓದಿದ್ದು 10ನೇ ತರಗತಿ ; ಕಟ್ಟಿದ್ದು ಬೃಹತ್ ಶಿಕ್ಷಣ ಸಾಮ್ರಾಜ್ಯ…..!

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

10ನೇ ತರಗತಿ ಓದಿದ್ರು, ಶಿಕ್ಷಣ ಸಾಮ್ರಾಜ್ಯ ಕಟ್ಟಿದ್ರು….
ಅನೇಕರಿಗೆ ಸ್ಫೂರ್ತಿಯುತ ಜೀವನ ನಡೆಸಿದ್ದ ಶಿವಶಂಕರಪ್ಪ, 10ನೇ ತರಗತಿವರೆಗೆ ಓದಿದ್ದರೂ ಸಾವಿರಾರು ಡಾಕ್ಟರ್, ಇಂಜಿನಿಯರ್‌ಗಳನ್ನು ಬಾಪೂಜಿ ಸಂಸ್ಥೆಯ ಮೂಲಕ ಸೃಷ್ಟಿಸಿದ್ದರು. ಶಾಮನೂರು ಅವರ ನಿಧನದಿಂದ ಮಧ್ಯ ಕರ್ನಾಟಕದ ಪ್ರಬಲ ಕೊಂಡಿಯೊಂದು ಕಳಚಿದಂತಾಗಿದೆ. ದಾವಣಗೆರೆ ಜಿಲ್ಲೆ ಅಕ್ಷರಶಃ ಅನಾಥವಾಗಿದೆ. ಹತ್ತನೇ ತರಗತಿಯವರೆಗೆ ಓದಿದ್ದ ಹುಡುಗನೊಬ್ಬ, ದಕ್ಷಿಣ ಭಾರತವೇ ತಿರುಗಿ ನೋಡುವಂತಹ ಶಿಕ್ಷಣ ಮತ್ತು ಉದ್ಯಮ ಸಾಮ್ರಾಜ್ಯ ಕಟ್ಟಿ ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದ್ದಾರೆ. ವಯಸ್ಸು ಕೇವಲ ಸಂಖ್ಯೆ ಅಷ್ಟೇ ಎಂದು ತಮ್ಮ 95 ನೇ ವಯಸ್ಸಿನಲ್ಲೂ ಸಾಬೀತುಪಡಿಸಿದ ಚೈತನ್ಯದ ಚಿಲುಮೆ ಶಾಮನೂರು ಶಿವಶಂಕರಪ್ಪ. ಅವರ ನಿಧನದಿಂದ ದಾವಣಗೆರೆ ಮಾತ್ರವಲ್ಲ, ಕರ್ನಾಟಕ ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ.

ಕರ್ನಾಟಕದ ಮ್ಯಾಂಚೆಸ್ಟರ್‌ ಆರ್ಥಿಕತೆ ಕುಸಿಯದಂತೆ ತಡೆದಿದ್ದ ಶಾಮನೂರು…
ಶಾಮನೂರು ಶಿವಶಂಕರಪ್ಪ ಅವರ ಆರಂಭಿಕ ಜೀವನ ತುಂಬಾನೇ ಸಿಂಪಲ್‌ ಆಗಿತ್ತು. ದಾವಣಗೆರೆಯ ಪ್ರತಿಷ್ಠಿತ ಶಾಮನೂರು ಕುಟುಂಬದ ಶಾಮನೂರು ಕಲ್ಲಪ್ಪ ಮತ್ತು ಸಾವಿತ್ರಮ್ಮ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಇವರು, ಹುಟ್ಟೂರು ದಾವಣಗೆರೆಯಲ್ಲೇ ಶಾಲಾ ಶಿಕ್ಷಣ ಮುಗಿಸಿದರು. 10ನೇ ತರಗತಿಯವರೆಗೆ ಮಾತ್ರ ಓದಿದ್ದ ಇವರು, ಮುಂದೆ ಬ್ಯುಸಿನೆಸ್ ಕ್ಷೇತ್ರಕ್ಕೆ ಇಳಿದು ದೊಡ್ಡ ಸಾಮ್ರಾಜ್ಯವನ್ನೇ ಕಟ್ಟಿದರು. ಒಂದು ಕಾಲದಲ್ಲಿ ದಾವಣಗೆರೆ ಕಾಟನ್ ಮಿಲ್‌ಗಳಿಗೆ ಫೇಮಸ್ ಆಗಿತ್ತು, ಇದನ್ನು ಕರ್ನಾಟಕದ ಮ್ಯಾಂಚೆಸ್ಟರ್ ಎನ್ನಲಾಗುತ್ತಿತ್ತು. ಆದರೆ, ಯಾವಾಗ ಹತ್ತಿ ಗಿರಣಿಗಳು ಮುಚ್ಚಲ್ಪಟ್ಟವೋ, ಆಗ ದಾವಣಗೆರೆಯ ಆರ್ಥಿಕತೆ ಕುಸಿಯದಂತೆ ತಡೆದವರು ಇದೇ ಶಾಮನೂರು.

ಇದನ್ನು ಓದಿ: ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ.!

ಸಾವಿರಾರು ಜನರಿಗೆ ಉದ್ಯೋಗ
ಭದ್ರಾ ಕಾಲುವೆ ಯೋಜನೆಯ ಲಾಭ ಪಡೆದು, ಕೃಷಿ ಆಧಾರಿತ ಉದ್ಯಮಗಳಿಗೆ ಕೈಹಾಕಿದರು. ಕುಕ್ಕುವಾಡದಲ್ಲಿ ನಷ್ಟದಲ್ಲಿದ್ದ ದಾವಣಗೆರೆ ಶುಗರ್ ಮಿಲ್ಸ್ ಅನ್ನು ಟೇಕ್ ಓವರ್ ಮಾಡಿ, ಅದನ್ನು ಲಾಭದಾಯಕವಾಗಿ ಬದಲಾಯಿಸಿದರು. ನಂತರ 1995ರಲ್ಲಿ ಶಾಮನೂರು ಶುಗರ್ಸ್ ಲಿಮಿಟೆಡ್ ಸ್ಥಾಪಿಸಿ, 1999ರಲ್ಲಿ ಉತ್ಪಾದನೆ ಆರಂಭಿಸಿದರು. ಕೇವಲ ಸಕ್ಕರೆ ಮಾತ್ರವಲ್ಲ, ಡಿಸ್ಟಿಲರಿ ಮತ್ತು ವಿದ್ಯುತ್ ಉತ್ಪಾದನೆಯನ್ನೂ ಆರಂಭಿಸಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿದರು.

ಶಾಮನೂರು ಅವರನ್ನು ಜನ ಪ್ರೀತಿಯಿಂದ ನೆನೆಯುವುದು ಅವರು ಕಟ್ಟಿದ ಶಿಕ್ಷಣ ಸಂಸ್ಥೆಗಳಿಗಾಗಿ. 1958ರಲ್ಲಿ ಧರ್ಮರತ್ನಾಕರ ರಾಜನಹಳ್ಳಿ ಮದ್ದೂರಾಯಪ್ಪ ಸ್ಥಾಪಿಸಿದ್ದ ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ ನೇತೃತ್ವವನ್ನು 1972ರಲ್ಲಿ ಶಾಮನೂರು ಶಿವಶಂಕರಪ್ಪ ವಹಿಸಿಕೊಂಡರು. ಅಂದು ಕೇವಲ 5 ಕಾಲೇಜುಗಳಿದ್ದ ಈ ಸಂಸ್ಥೆಯನ್ನು, ಇಂದು 50ಕ್ಕೂ ಹೆಚ್ಚು ಸಂಸ್ಥೆಗಳ ಹೆಮ್ಮರವಾಗಿ ಬೆಳೆಸಿದ್ದಾರೆ. ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಜೆಜೆಎಂ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು, ಫಾರ್ಮಸಿ, ನರ್ಸಿಂಗ್ ಹೀಗೆ ಹತ್ತು ಹಲವು ವೃತ್ತಿಪರ ಕೋರ್ಸ್‌ಗಳನ್ನು ದಾವಣಗೆರೆಗೆ ತಂದರು. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ, ಅದರಲ್ಲೂ ಹೆಣ್ಣುಮಕ್ಕಳಿಗೆ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಎವಿಕೆ ಮಹಿಳಾ ಕಾಲೇಜನ್ನು ಬಲಪಡಿಸಿದರು, ಅಲ್ಲಿ ಈಗ ವರ್ಷಕ್ಕೆ 3,400ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪದವಿ ಪಡೆಯುತ್ತಿದ್ದಾರೆ. ಕುನಿಬೆಳಕೆರೆ, ಹರಿಹರ, ತೊಲಹುಣಸೆ ಮತ್ತು ಚನ್ನಗಿರಿಯಂತಹ ಗ್ರಾಮೀಣ ಭಾಗಗಳಲ್ಲೂ ಕಾಲೇಜುಗಳನ್ನು ತೆರೆದು ಬಡವರ ಮನೆಬಾಗಿಲಿಗೆ ಶಿಕ್ಷಣ ತಲುಪಿಸಿದ್ದು ಇದೇ ಶಾಮನೂರು ಶಿವಶಂಕರಪ್ಪ.

ಹೀಗೆ ಅನೇಕ ಶಿಕ್ಷಣ ಸಂಸ್ಥೆ, ಸಂಘ ಸಂಸ್ಥೆ ಸೇರಿದಂತೆ ಉದ್ಯಮಗಳನ್ನು ಕಟ್ಟಿ ಇವರು ಮಧ್ಯ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಬೆಣ್ಣೆ ನಗರಿ ದಾವಣಗೆರೆಯನ್ನು ವಿದ್ಯಾನಗರಿಯನ್ನಾಗಿ ಮಾರ್ಪಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

12 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

13 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

14 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

15 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

15 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

16 hours ago