ರಾಜ್ಯ

ಡಿಸೇಲ್‌ ಬೆಲೆ ಏರಿಕೆ|ಏಪ್ರಿಲ್.‌15 ಅನಿರ್ದಿಷ್ಟಾವಧಿ ಲಾರಿ ಮುಷ್ಕರ: ಅಧ್ಯಕ್ಷ ಷಣ್ಮುಗಪ್ಪ

ಬೆಂಗಳೂರು: ಲಾರಿ ಮಾಲೀಕರ ಸಂಘದ ವತಿಯಿಂದ ಏಪ್ರಿಲ್‌.15 ರಿಂದ ಡಿಸೇಲ್‌ ದರ ಏರಿಕೆಯನ್ನು ಖಂಡಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಮಾಡಲಾಗುವುದು ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಏಳು ತಿಂಗಳಲ್ಲಿ ಡಿಸೇಲ್‌ ಬೆಲೆ 5ರೂ. ಏರಿಕೆಯಾಗಿದೆ. ಈ ಬೆಲೆಯಿಂದ ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡೋದು ಸರಿಯಲ್ಲ ಎಂದರು.

ಡಿಸೇಲ್‌ ದರ, ಫಿಟ್ನೆಸ್‌ ಫೀಸ್‌, ಬಾರ್ಡ್‌ರ್‌ ಚೆಕ್‌ ಪೋಸ್ಟ್‌ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರವನ್ನು ಏಪ್ರಿಲ್‌.14ರ ಮಧ್ಯರಾತ್ರಿಯಿಂದಲೇ ಹೋರಾಟ ಪ್ರಾರಂಭ ಮಾಡಲಿದ್ದೇವೆ. ಅಲ್ಲದೇ ಹೋರಾಟ ಶುರುವಾದ ನಂತರ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಅವುಗಳನ್ನು ಪರೀಕ್ಷಿಸಲು ಚೆಕ್ ಪೋಸ್ಟ್‌ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಇನ್ನೂ ಈ ಮುಷ್ಕರಕ್ಕೆ ಪೆಟ್ರೋಲ್‌ ಮಾಲೀಕರು ಬೆಂಬಲ ನೀಡಿದ್ದಾರೆ. ಹೀಗಾಗಿ ಏರ್‌ಪೋರ್ಟ್‌ ಟ್ಯಾಕ್ಸಿ, ಮರಳು ಲಾರಿ, ಜಲ್ಲಿ ಕಲ್ಲು, ಗೂಡ್ಸ್‌ ವಾಹನಗಳು, ಪೆಟ್ರೋಲ್‌ ಮತ್ತು ಡಿಸೇಲ್‌ ಲಾರಿ ಹಾಗೂ ಅಕ್ಕಿ ಲೋಡ್‌ ಲಾರಿಗಳನ್ನು ಸಹ ಬಂದ್‌ ಮಾಡಲಾಗುತ್ತದೆ. ಒಟ್ಟಾರೆ ಎಲ್ಲಾ ಬಗೆಯ ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಿದೆ. ಆದರೆ ಈ ಹೋರಾಟ ನಮ್ಮ ಬೇಡಿಕೆಗಳು ಈಡೇರುವವರೆಗೂ ನಡೆಯುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

40 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago