ಬೆಂಗಳೂರು: ಲಾರಿ ಮಾಲೀಕರ ಸಂಘದ ವತಿಯಿಂದ ಏಪ್ರಿಲ್.15 ರಿಂದ ಡಿಸೇಲ್ ದರ ಏರಿಕೆಯನ್ನು ಖಂಡಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಮಾಡಲಾಗುವುದು ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಏಳು ತಿಂಗಳಲ್ಲಿ ಡಿಸೇಲ್ ಬೆಲೆ 5ರೂ. ಏರಿಕೆಯಾಗಿದೆ. ಈ ಬೆಲೆಯಿಂದ ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡೋದು ಸರಿಯಲ್ಲ ಎಂದರು.
ಡಿಸೇಲ್ ದರ, ಫಿಟ್ನೆಸ್ ಫೀಸ್, ಬಾರ್ಡ್ರ್ ಚೆಕ್ ಪೋಸ್ಟ್ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರವನ್ನು ಏಪ್ರಿಲ್.14ರ ಮಧ್ಯರಾತ್ರಿಯಿಂದಲೇ ಹೋರಾಟ ಪ್ರಾರಂಭ ಮಾಡಲಿದ್ದೇವೆ. ಅಲ್ಲದೇ ಹೋರಾಟ ಶುರುವಾದ ನಂತರ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಅವುಗಳನ್ನು ಪರೀಕ್ಷಿಸಲು ಚೆಕ್ ಪೋಸ್ಟ್ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಇನ್ನೂ ಈ ಮುಷ್ಕರಕ್ಕೆ ಪೆಟ್ರೋಲ್ ಮಾಲೀಕರು ಬೆಂಬಲ ನೀಡಿದ್ದಾರೆ. ಹೀಗಾಗಿ ಏರ್ಪೋರ್ಟ್ ಟ್ಯಾಕ್ಸಿ, ಮರಳು ಲಾರಿ, ಜಲ್ಲಿ ಕಲ್ಲು, ಗೂಡ್ಸ್ ವಾಹನಗಳು, ಪೆಟ್ರೋಲ್ ಮತ್ತು ಡಿಸೇಲ್ ಲಾರಿ ಹಾಗೂ ಅಕ್ಕಿ ಲೋಡ್ ಲಾರಿಗಳನ್ನು ಸಹ ಬಂದ್ ಮಾಡಲಾಗುತ್ತದೆ. ಒಟ್ಟಾರೆ ಎಲ್ಲಾ ಬಗೆಯ ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಿದೆ. ಆದರೆ ಈ ಹೋರಾಟ ನಮ್ಮ ಬೇಡಿಕೆಗಳು ಈಡೇರುವವರೆಗೂ ನಡೆಯುತ್ತದೆ ಎಂದು ತಿಳಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…