ರಾಜ್ಯ

ಡಿಸೇಲ್‌ ಬೆಲೆ ಏರಿಕೆ|ಏಪ್ರಿಲ್.‌15 ಅನಿರ್ದಿಷ್ಟಾವಧಿ ಲಾರಿ ಮುಷ್ಕರ: ಅಧ್ಯಕ್ಷ ಷಣ್ಮುಗಪ್ಪ

ಬೆಂಗಳೂರು: ಲಾರಿ ಮಾಲೀಕರ ಸಂಘದ ವತಿಯಿಂದ ಏಪ್ರಿಲ್‌.15 ರಿಂದ ಡಿಸೇಲ್‌ ದರ ಏರಿಕೆಯನ್ನು ಖಂಡಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಮಾಡಲಾಗುವುದು ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಏಳು ತಿಂಗಳಲ್ಲಿ ಡಿಸೇಲ್‌ ಬೆಲೆ 5ರೂ. ಏರಿಕೆಯಾಗಿದೆ. ಈ ಬೆಲೆಯಿಂದ ಲಾರಿ ಸೇರಿದಂತೆ ವಾಣಿಜ್ಯ ವಾಹನಗಳ ಮಾಲೀಕರು ನೇಣು ಹಾಕಿಕೊಳ್ಳುವ ಸ್ಥಿತಿ ಬಂದಿದೆ. ಏನಾದರೂ ಫ್ರೀ ಕೊಡಲಿ, ಆದರೆ ಹೊಟ್ಟೆ ಮೇಲೆ ಹೊಡೆದು ದರ ಏರಿಕೆ ಮಾಡೋದು ಸರಿಯಲ್ಲ ಎಂದರು.

ಡಿಸೇಲ್‌ ದರ, ಫಿಟ್ನೆಸ್‌ ಫೀಸ್‌, ಬಾರ್ಡ್‌ರ್‌ ಚೆಕ್‌ ಪೋಸ್ಟ್‌ ದರ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮುಷ್ಕರವನ್ನು ಏಪ್ರಿಲ್‌.14ರ ಮಧ್ಯರಾತ್ರಿಯಿಂದಲೇ ಹೋರಾಟ ಪ್ರಾರಂಭ ಮಾಡಲಿದ್ದೇವೆ. ಅಲ್ಲದೇ ಹೋರಾಟ ಶುರುವಾದ ನಂತರ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡಲ್ಲ. ಅವುಗಳನ್ನು ಪರೀಕ್ಷಿಸಲು ಚೆಕ್ ಪೋಸ್ಟ್‌ಗಳಲ್ಲಿ ಖುದ್ದು ನಾವುಗಳೇ ನಿಲ್ಲುತ್ತೇವೆ. ಯಾವುದೇ ವಾಣಿಜ್ಯ ವಾಹನಗಳನ್ನು ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಇನ್ನೂ ಈ ಮುಷ್ಕರಕ್ಕೆ ಪೆಟ್ರೋಲ್‌ ಮಾಲೀಕರು ಬೆಂಬಲ ನೀಡಿದ್ದಾರೆ. ಹೀಗಾಗಿ ಏರ್‌ಪೋರ್ಟ್‌ ಟ್ಯಾಕ್ಸಿ, ಮರಳು ಲಾರಿ, ಜಲ್ಲಿ ಕಲ್ಲು, ಗೂಡ್ಸ್‌ ವಾಹನಗಳು, ಪೆಟ್ರೋಲ್‌ ಮತ್ತು ಡಿಸೇಲ್‌ ಲಾರಿ ಹಾಗೂ ಅಕ್ಕಿ ಲೋಡ್‌ ಲಾರಿಗಳನ್ನು ಸಹ ಬಂದ್‌ ಮಾಡಲಾಗುತ್ತದೆ. ಒಟ್ಟಾರೆ ಎಲ್ಲಾ ಬಗೆಯ ವಾಣಿಜ್ಯ ವಾಹನಗಳು ಸೇರಿದಂತೆ ಒಟ್ಟು 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಿದೆ. ಆದರೆ ಈ ಹೋರಾಟ ನಮ್ಮ ಬೇಡಿಕೆಗಳು ಈಡೇರುವವರೆಗೂ ನಡೆಯುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago