ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟು, ಒಟ್ಟು 18 ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಸುದ್ದಿ ತೀವ್ರ ದುಃಖವಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಸಂಭವಿಸಿದ ದುರಂತದ ಕುರಿತು ಕೂಡಲೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಚಿವರು ಸೂಕ್ತ ಚಿಕಿತ್ಸೆ ಕೊಡಿಸಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಲು ಅಧಿಕಾರಿಗಳನ್ನು ನಿಯೋಜಿಸಲು ಸೂಚನೆ ನೀಡಿದ್ದಾರೆ.
ಈ ಘಟನೆಯಲ್ಲಿ ಕುರ್ಡಿ ಗ್ರಾಮದ ಸಮರ್ಥ (7 ವರ್ಷ) ಹಾಗೂ 7ನೇ ತರಗತಿಯ ವಿದ್ಯಾರ್ಥಿ ಶ್ರೀಕಾಂತ (12 ವರ್ಷ) ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆಯ ಸುದ್ದಿ ತಿಳಿದು ನಿಜಕ್ಕೂ ತೀವ್ರ ಬೇಸರವಾಯಿತು. ಮೃತ ವಿದ್ಯಾರ್ಥಿಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಸ್ಕೂಲ್ ಬಸ್ನಲ್ಲಿ ಇದ್ದ ಮೂವರು ಮಕ್ಕಳ ಕಾಲುಗಳೇ ತುಂಡಾಗಿರುವ ಮಾಹಿತಿ ಇದೆ. ಇವರಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…