ರಾಜ್ಯ

ಸಾಕ್ಷ್ಯಾನಾಶ ಆರೋಪ; ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.

ಶನಿವಾರ(ಜೂನ್‌.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಾಗಿ ತನಿಖೆ ನಡೆಸುತ್ತಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದರು.

ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯಾ ನಾಶ ಮಾಡಿದ್ದೇನೆ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಕ್ಷೇತ್ರದ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದರೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ ಎಂದು ತಮ್ಮ ಮೇಲಿನ ಆರೋಪಗಳನ್ನು ಸಾರಸಗಟಾಗಿ ತಳ್ಳಿ ಹಾಕಿದರು. ಯಾವುದೇ ತನಿಖೆ ಮಾಡಿದರೂ ನಾನು ಕಾನೂನುಬದ್ದವಾಗಿ ಎದುರಿಸಲು ಸಿದ್ದನಿದ್ದೇನೆ ಎಂದು ಪಾಟೀಲ್ ತಿರುಗೇಟು ನೀಡಿದರು.

ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ ಅದು ನನ್ನ ಸ್ವಂತ ಮನೆಯೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದುಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಯಾ ಮುಖವೂ ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧವೂ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಎಂದು ಎಲ್ಲಾದರೂ ಹೇಳಿರುವ ಬಗ್ಗೆ ವರದಿಯಾಗಿದೆಯೇ? ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ ಎಂದು ಪಾಟೀಲ್ ಪ್ರಶ್ನಿಸಿದರು.

ಹಿಂದೆಯೂ ಸಚಿವರಾಗಿದ್ದ ವೇಳೆ ಇಲಾಖೆ, ಸರ್ಕಾರ ಮತ್ತು ಪಕ್ಷಕ್ಕೆ ಹೆಸರು ಬರುವ ಕೆಲಸ ಮಾಡುತ್ತಿದ್ದೇನೆ. ನಾನು ಸತ್ಯ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುವವನು. ಇಂತಹ ಆರೋಪವನ್ನು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿ ಪಕ್ಷ ಬಿಜೆಪಿಯವರು ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಆಧಾರದ ಮೇಲೆ ಅವರು ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಮೇಲೆ ರಾಜೀನಾಮೆ ನೀಡುವ ಔಚಿತ್ಯವಾದರೂ ಏನು ಎಂದು ಶರಣಪ್ರಕಾಶ್ ಪಾಟೀಲ್ ಮರು ಪ್ರಶ್ನೆ ಹಾಕಿದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

7 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

24 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

37 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago