ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.
ಶನಿವಾರ(ಜೂನ್.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಾಗಿ ತನಿಖೆ ನಡೆಸುತ್ತಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದರು.
ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯಾ ನಾಶ ಮಾಡಿದ್ದೇನೆ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಕ್ಷೇತ್ರದ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದರೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ ಎಂದು ತಮ್ಮ ಮೇಲಿನ ಆರೋಪಗಳನ್ನು ಸಾರಸಗಟಾಗಿ ತಳ್ಳಿ ಹಾಕಿದರು. ಯಾವುದೇ ತನಿಖೆ ಮಾಡಿದರೂ ನಾನು ಕಾನೂನುಬದ್ದವಾಗಿ ಎದುರಿಸಲು ಸಿದ್ದನಿದ್ದೇನೆ ಎಂದು ಪಾಟೀಲ್ ತಿರುಗೇಟು ನೀಡಿದರು.
ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ ಅದು ನನ್ನ ಸ್ವಂತ ಮನೆಯೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದುಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಎಸ್ಐಟಿ ವಶದಲ್ಲಿರುವ ವ್ಯಕ್ತಿಯಾ ಮುಖವೂ ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧವೂ ಇಲ್ಲ. ಎಸ್ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಎಂದು ಎಲ್ಲಾದರೂ ಹೇಳಿರುವ ಬಗ್ಗೆ ವರದಿಯಾಗಿದೆಯೇ? ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ ಎಂದು ಪಾಟೀಲ್ ಪ್ರಶ್ನಿಸಿದರು.
ಹಿಂದೆಯೂ ಸಚಿವರಾಗಿದ್ದ ವೇಳೆ ಇಲಾಖೆ, ಸರ್ಕಾರ ಮತ್ತು ಪಕ್ಷಕ್ಕೆ ಹೆಸರು ಬರುವ ಕೆಲಸ ಮಾಡುತ್ತಿದ್ದೇನೆ. ನಾನು ಸತ್ಯ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುವವನು. ಇಂತಹ ಆರೋಪವನ್ನು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿ ಪಕ್ಷ ಬಿಜೆಪಿಯವರು ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಆಧಾರದ ಮೇಲೆ ಅವರು ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಮೇಲೆ ರಾಜೀನಾಮೆ ನೀಡುವ ಔಚಿತ್ಯವಾದರೂ ಏನು ಎಂದು ಶರಣಪ್ರಕಾಶ್ ಪಾಟೀಲ್ ಮರು ಪ್ರಶ್ನೆ ಹಾಕಿದರು
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…