ರಾಜ್ಯ

ಸಾಕ್ಷ್ಯಾನಾಶ ಆರೋಪ; ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.

ಶನಿವಾರ(ಜೂನ್‌.8) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಾಗಿ ತನಿಖೆ ನಡೆಸುತ್ತಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದರು.

ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಯಲ್ಲಿ ನಾನು, ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷ ಬಸವರಾಜ್ ದದ್ದಲ್ ಸೇರಿದಂತೆ ಕೆಲವರು ಸಭೆ ನಡೆಸಿ ಸಾಕ್ಷ್ಯಾ ನಾಶ ಮಾಡಿದ್ದೇನೆ ಆರೋಪ ಕೇಳಿಬಂದಿದೆ. ವಾಸ್ತವವಾಗಿ ಮೇ 24ರಂದು ಲೋಕಸಭಾ ಕ್ಷೇತ್ರದ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಚೇರಿಗೆ ಭೇಟಿ ನೀಡಿರಲಿಲ್ಲ. ಆದರೂ ನಾನು ಕಚೇರಿಯಲ್ಲಿ ಇದ್ದರೆ ಎಂದರೆ, ಇದಕ್ಕಿಂತ ಅಪಹಾಸ್ಯ ಇನ್ನೇನಿದೆ ಎಂದು ತಮ್ಮ ಮೇಲಿನ ಆರೋಪಗಳನ್ನು ಸಾರಸಗಟಾಗಿ ತಳ್ಳಿ ಹಾಕಿದರು. ಯಾವುದೇ ತನಿಖೆ ಮಾಡಿದರೂ ನಾನು ಕಾನೂನುಬದ್ದವಾಗಿ ಎದುರಿಸಲು ಸಿದ್ದನಿದ್ದೇನೆ ಎಂದು ಪಾಟೀಲ್ ತಿರುಗೇಟು ನೀಡಿದರು.

ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ. ಸುಳ್ಳು ಆರೋಪಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಅಷ್ಟಕ್ಕೂ ವಿಕಾಸಸೌಧದ ಕೊಠಡಿ ಸರ್ಕಾರ ನೀಡಿರುವ ಕಚೇರಿ ಅದು ನನ್ನ ಸ್ವಂತ ಮನೆಯೂ ಅಲ್ಲ. ನಾನು ಸಚಿವನಾಗಿರುವುದರಿಂದ ನನ್ನನ್ನು ನೋಡಲು ರಾಜ್ಯದ ನಾನಾ ಭಾಗಗಳಿಂದ ನೂರಾರು ಜನ ಬಂದು ಹೋಗುತ್ತಾರೆ. ಬಂದುಹೋಗುವವರ ಪೂರ್ಣ ವಿವರಗಳನ್ನು ಕಲೆ ಹಾಕಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಎಸ್‍ಐಟಿ ವಶದಲ್ಲಿರುವ ವ್ಯಕ್ತಿಯಾ ಮುಖವೂ ನೋಡಿಲ್ಲ. ನನಗೂ, ಅವರಿಗೂ ಯಾವುದೇ ಸಂಬಂಧವೂ ಇಲ್ಲ. ಎಸ್‍ಐಟಿ ಅಧಿಕಾರಿಗಳ ಮುಂದೆ ಆತ ಏನು ಹೇಳಿದ್ದಾನೆ ಎಂಬುದು ನನಗೂ ಗೊತ್ತಿಲ್ಲ. ವೈದ್ಯಕೀಯ ಶಿಕ್ಷಣ ಸಚಿವರು ಎಂದು ಎಲ್ಲಾದರೂ ಹೇಳಿರುವ ಬಗ್ಗೆ ವರದಿಯಾಗಿದೆಯೇ? ಊಹಾಪೋಹಗಳಿಗೆ ನಾನೇಕೆ ಉತ್ತರ ಕೊಡಲಿ ಎಂದು ಪಾಟೀಲ್ ಪ್ರಶ್ನಿಸಿದರು.

ಹಿಂದೆಯೂ ಸಚಿವರಾಗಿದ್ದ ವೇಳೆ ಇಲಾಖೆ, ಸರ್ಕಾರ ಮತ್ತು ಪಕ್ಷಕ್ಕೆ ಹೆಸರು ಬರುವ ಕೆಲಸ ಮಾಡುತ್ತಿದ್ದೇನೆ. ನಾನು ಸತ್ಯ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುವವನು. ಇಂತಹ ಆರೋಪವನ್ನು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿ ಪಕ್ಷ ಬಿಜೆಪಿಯವರು ರಾಜೀನಾಮೆ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಆಧಾರದ ಮೇಲೆ ಅವರು ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದ ಮೇಲೆ ರಾಜೀನಾಮೆ ನೀಡುವ ಔಚಿತ್ಯವಾದರೂ ಏನು ಎಂದು ಶರಣಪ್ರಕಾಶ್ ಪಾಟೀಲ್ ಮರು ಪ್ರಶ್ನೆ ಹಾಕಿದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

2 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

3 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

4 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago