ರಾಜ್ಯ

ರಾಜ್ಯದಲ್ಲಿ 8,300 ಕೋಟಿ ಹೂಡಿಕೆ ಮಾಡಲಿರುವ ಷೆರ್ವನ್‌: ಎಂ.ಬಿ ಪಾಟೀಲ್‌

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌, ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ಹೂಡಿಕೆ ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜೊತೆಗೆ ಷೆರ್ವನ್‌ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಹೂಡಿಕೆ ಘೋಷಿಸಲಾಗಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಅವರು ಉಪಸ್ಥಿತರಿದ್ದರು.

“ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಉತ್ತೇಜಿಸುವಲ್ಲಿ ಕರ್ನಾಟಕವು ನಿರಂತರವಾಗಿ ಮುನ್ನಡೆ ಸಾಧಿಸುತ್ತಿದೆ. ₹8,300 ಕೋಟಿ ಮೊತ್ತದ ಈ ಹೂಡಿಕೆ ಕಾರ್ಯಗತಗೊಳಿಸುವಲ್ಲಿನ ರಾಜ್ಯ ಸರ್ಕಾರ ಮತ್ತು ಷೆರ್ವನ್‌ ಕಂಪನಿ ನಡುವಣ ಸಹಯೋಗವು ಕರ್ನಾಟಕದ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿನ ಮಹತ್ವದ ಪ್ರಗತಿಗೆ ಸ್ಪಷ್ಟ ನಿದರ್ಶನವಾಗಿದೆ. ನಾವೀನ್ಯತೆ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ ಉತ್ತೇಜಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ಸಚಿವ ಪಾಟೀಲ ಅವರು ತಿಳಿಸಿದ್ದಾರೆ.

ಷೆರ್ವನ್‌ ಇಂಡಿಯಾದ ಮುಖ್ಯಸ್ಥ ಅಕ್ಷಯ್ ಸಾಹ್ನಿ ಅವರು ಈ ಹೊಸ ಕೇಂದ್ರದ ಮುನ್ನೋಟದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, “ಕೈಗೆಟುಕುವ, ವಿಶ್ವಾಸಾರ್ಹವಾದ ಶುದ್ಧ ಇಂಧನ ಒದಗಿಸಲು ಭಾರತದ ಅಸಾಧಾರಣ ಪ್ರತಿಭಾನ್ವಿತರು ನಮ್ಮ ಜಾಗತಿಕ ಜಾಲದ ಸಂಪನ್ಮೂಲ ಹಾಗೂ ಪರಿಣತಿ ಜೊತೆಗೆ ಕೆಲಸ ಮಾಡಲು ಈ ಕೇಂದ್ರವು ಅವಕಾಶ ಒದಗಿಸಲಿದೆʼ ಎಂದು ಹೇಳಿದ್ದಾರೆ.

ʼಈ ಕೇಂದ್ರದಲ್ಲಿ ಇಂಧನ ವ್ಯವಸ್ಥೆಯ ತಂತ್ರಜ್ಞಾನ ಆವಿಷ್ಕಾರಗಳಿಗೆ ವೇಗ ನೀಡಲು ಎಂಜಿನಿಯರಿಂಗ್‌ ಮತ್ತು ಡಿಜಿಟಲ್‌ ಸೇವೆಗಳಿಗೆ ಸಂಬಂಧಿಸಿದಂತೆ 2025ರ ವೇಳೆಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಿದೆʼ ಎಂದು ತಿಳಿಸಿದ್ದಾರೆ.

ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು ಈಗಾಗಲೇ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿ) ನೆಲೆಯಾಗಿದ್ದು, ಹಣಕಾಸು, ಆರೋಗ್ಯ, ರಿಟೇಲ್‌ ವ್ಯಾಪಾರ, ತಯಾರಿಕಾ ಮತ್ತಿತರ ವಲಯಗಳು ಸೇರಿದಂತೆ ಭಾರತದ ʼಜಿಸಿಸಿʼಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲು ಹೊಂದಿದೆ ಎಂದು ಸಚಿವರು ವಿವರಿಸಿದರು.

ಷೆರ್ವನ್‌ ಶ್ರೇಷ್ಠತಾ ಕೇಂದ್ರವು (ಇಎನ್‌ಜಿಐಎನ್‌ಇ) ಸ್ಥಳೀಯ ವೃತ್ತಿಪರರಿಗೆ ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. ಸದ್ಯದ ಜಾಗತಿಕ ಇಂಧನ ಬೇಡಿಕೆಗಳನ್ನು ಪೂರೈಸುವ ಸವಾಲಿಗೆ ಸ್ಪಂದಿಸಲು ಮತ್ತು ಭವಿಷ್ಯದಲ್ಲಿ ಕಡಿಮೆ ಇಂಗಾಲ ಹೊರಸೂಸುವ ಶುದ್ಧ ಇಂಧನ ತಯಾರಿಸುವುದಕ್ಕೆ ಕೊಡುಗೆ ನೀಡಲು ಅವರಿಗೆ ಅವಕಾಶ ನೀಡಲಿದೆ. ಇಲ್ಲಿ ಕಾರ್ಯನಿರ್ವಹಿಸಲಿರುವ ಷೆರ್ವನ್‌ ತಂಡವು ಅಂತರರಾಷ್ಟ್ರೀಯ ಭಾಗಿದಾರರ ಸಹಭಾಗಿತ್ವದಲ್ಲಿ ಸಂಕೀರ್ಣ ಸ್ವರೂಪದ ಜಾಗತಿಕ ಕಾರ್ಯಾಚರಣೆಗಳು ಮತ್ತು ಇಂಧನ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ಪಾಟೀಲ ವಿವರಿಸಿದರು.

ಬೆಂಗಳೂರಿನಲ್ಲಿ ಷೆರ್ವನ್‌ ಶ್ರೇಷ್ಠತಾ ಕೇಂದ್ರದ ಸ್ಥಾಪನೆಯು ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದ್ಯತೆಗಳಿಗೆ ಸೂಕ್ತವಾಗಿ ಹೊಂದಿಕೊಳ್ಳಲಿದೆ. ಈ ಹೂಡಿಕೆಯು ಜಾಗತಿಕ ಕಂಪನಿಗಳ ಪಾಲಿಗೆ ಕರ್ನಾಟಕವು ಪ್ರಮುಖ ತಾಣವಾಗಿರುವುದರ ಮಹತ್ವವನ್ನು ಬಿಂಬಿಸುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಉದ್ಯಮ, ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಕರ್ನಾಟಕ ಸರ್ಕಾರದ ಅಚಲ ಬದ್ಧತೆಗೂ ಇದು ಸಾಕ್ಷಿಯಾಗಿದೆ ಎಂದೂ ಸಚಿವರು ಹೇಳಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಮತ್ತು ಷೆರ್ವನ್‌ನ ಪ್ರತಿನಿಧಿಗಳೂ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

4 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

18 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

20 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

21 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

24 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

28 mins ago