Mysore
29
few clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು ನಾಮಕರಣ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕೆಂದರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಘೋಷಿಸುವುದಾಗಿ ಅವರು ತಿಳಿಸಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಭಾಷಣಕ್ಕೂ ಮೊದಲು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರಿಡಬೇಕು ಎಂದು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಮನವಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ, ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು ನಾಮಕರಣಕ್ಕೆ ಸಮ್ಮತಿಸಿದರು.

ಅಲ್ಲಮ ಪ್ರಭು ಹೆಸರು ನಾಮಕರಣ ಸಂಬಂಧ ಸಿಎಂ ಟ್ವೀಟ್‌:

ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು.

ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯಲ್ಲಿ ನಿಂತು ಈ ಘೋಷಣೆಯನ್ನು ಮಾಡಲು ನನಗೆ ಸಂತಸವಾಗುತ್ತಿದೆ. ಇದು ಅಲ್ಲಮಪ್ರಭು ಅವರ ಜೀವನ ಮತ್ತು ಆದರ್ಶಗಳಿಗೆ ನಾವು ನೀಡುವ ಗೌರವ ಎಂದು ಭಾವಿಸಿದ್ದೇನೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!