ರಾಜ್ಯ

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು ನಾಮಕರಣ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿಂದು ನಡೆದ ಕಾಂಗ್ರೆಸ್‌ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕೆಂದರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರೇ. ಅಲ್ಲದೇ ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಘೋಷಿಸುವುದಾಗಿ ಅವರು ತಿಳಿಸಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಭಾಷಣಕ್ಕೂ ಮೊದಲು ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರಿಡಬೇಕು ಎಂದು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಮನವಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ, ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಹೆಸರು ನಾಮಕರಣಕ್ಕೆ ಸಮ್ಮತಿಸಿದರು.

ಅಲ್ಲಮ ಪ್ರಭು ಹೆಸರು ನಾಮಕರಣ ಸಂಬಂಧ ಸಿಎಂ ಟ್ವೀಟ್‌:

ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲಾಗುವುದು.

ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಜನ್ಮಭೂಮಿ ಶಿವಮೊಗ್ಗ ಜಿಲ್ಲೆಯಲ್ಲಿ ನಿಂತು ಈ ಘೋಷಣೆಯನ್ನು ಮಾಡಲು ನನಗೆ ಸಂತಸವಾಗುತ್ತಿದೆ. ಇದು ಅಲ್ಲಮಪ್ರಭು ಅವರ ಜೀವನ ಮತ್ತು ಆದರ್ಶಗಳಿಗೆ ನಾವು ನೀಡುವ ಗೌರವ ಎಂದು ಭಾವಿಸಿದ್ದೇನೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

3 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

14 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

14 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

14 hours ago