ರಾಜ್ಯ

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ. ಯಾರು ಶಿವಾಜಿ ‌ಮಹಾರಾಜರನ್ನು ಮುಸ್ಲಿಂ ವಿರೋಧಿ ಅಂತ ಹೇಳಬಾರದು. ಇಲ್ಲಿ ಯಾರೂ ಇತಿಹಾಸದ ಬಗ್ಗೆ ಸುಳ್ಳು ಹೇಳಬಾರದು. ನಾನು ಮರಾಠ ಸಮುದಾಯದವನೇ ಎಂದು ಕಾರ್ಮಿಕ ಸಚಿವ ಸಂತೋಷ್​​ ಲಾಡ್​ ಹೇಳಿದ್ದಾರೆ.

ಜಿಲ್ಲೆಯ ಅಥಣಿಯಲ್ಲಿ ನಡೆದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ ಲಾಡ್​, ಎಲ್ಲರೂ ಮರಾಠರ ಬಗ್ಗೆ ಮಾತನಾಡುತ್ತಾರೆ. ಆದರೆ ಯಾರೂ ಗ್ರಾಮ ಪಂಚಾಯಿತಿಯಿಂದ ಹಿಡಿದು ಬೇರೆ ಸ್ಥಾನಕ್ಕೆ ಟಿಕೆಟ್ ಕೊಡಿವುದಿಲ್ಲ ಎಂದಿದ್ದಾರೆ. ಶಿವಾಜಿ ‌ಮಹಾರಾಜರನ್ನು ಮುಸ್ಲಿಂ ವಿರೋಧಿ ಅಂತ ಯಾರು ಹೇಳಬಾರದು ಎಂದ ಸಚಿವ ಸಂತೋಷ್ ಲಾಡ್​​ಗೆ ಶಿವಾಜಿ ಸಹೋದರ ಸಂಭಾಜಿ ಮಹಾರಾಜರ ಮೇಲೆ ಮುಸ್ಲಿಂ ಸುಲ್ತಾನರು ನಡೆಸಿದ್ದ ದೌರ್ಜನ್ಯದ ವೇದಿಕೆ ಮೇಲೆ ಶಾಸಕ ಯತ್ನಾಳ್​ ವಿವರಿಸಿದರು. ಈ ಇತಿಹಾಸ ಸುಳ್ಳು ಎಂದು ವಾದಿಸಿ ಸಚಿವ ಸಂತೋಷ್​ ಲಾಡ್​​ ತಮ್ಮ ಭಾಷಣ ಮಾಡಿದರು.

ಇದನ್ನೂ ಓದಿ:-ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಿಷ್ಟು
ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ಶಿವಾಜಿ ಮಹಾರಾಜರು ನಮ್ಮ ದೇಶದ ಆದರ್ಶ ವ್ಯಕ್ತಿ. ವಿಜಯಪುರದಲ್ಲಿ ಶಿವಾಜಿ ಪ್ರತಿಮೆ ಕೂರಿಸೋದು ಸುಲಭ ಅಲ್ಲ, ಏಕೆಂದರೆ ಅಲ್ಲಿ ಪಾಕಿಸ್ತಾನ ಮೇಡ್​ ಬಹಳಷ್ಟಿದೆ ಎಂದು ಕಿಡಿಕಾರಿದರು.

ಒಂದು ಮುಂಜಾನೆ ಶಿವಾಜಿ ವಿಜಯಪುರಕ್ಕೆ ಹೊರಟಿದ್ದರು. ದೇಶದ್ರೋಹಿಗಳ ರುಂಡ ಕಡಿಯುವ ಕೆಲಸ ಈಗ ಆಗಬೇಕು. 2028ಕ್ಕೆ ನಾವೆಲ್ಲಾ ಈ ಕೆಲಸ ಮಾಡಬೇಕಿದೆ. ಮರಾಠ ಅಭಿವೃದ್ಧಿ ನಿಗಮ ವಿಚಾರವಾಗಿ ಚರ್ಚೆ ನಡೆಯಿತು. ಮರಾಠಿ ಭಾಷೆ ವಿರೋಧಿಸುತ್ತೀರಿ, ಉರ್ದು ಭಾಷೆ ಎಲ್ಲಿಯದ್ದು? ಮರಾಠಿ ಭಾಷೆ ವಿರೋಧಿಸುವವರು, ಉರ್ದು ಯಾಕೆ ವಿರೋಧಿಸಲ್ಲ. ಧಮ್​, ತಾಕತ್​ ಇದ್ದರೆ ಉರ್ದು ಭಾಷೆ ಬೋರ್ಡ್ ತೆಗೆಸಿರಿ. ಇಲ್ಲಿ ನಾವು ಇನ್ಮುಂದೆ ಜೀವನ ಮಾಡುವುದೇ ಕಷ್ಟ ಇದೆ. ಎಲ್ಲರೂ ಯೋಗಿ ಆದಿತ್ಯನಾಥ್ ಆಗಬೇಕು. ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು. ಬಸನಗೌಡ ಇದ್ದವ ನಾನು ಬಷೀರ್‌ ಅಹ್ಮದ್ ಆಗಬೇಕಾಗುತ್ತಿತ್ತು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

5 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

52 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

54 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

57 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago