ರಾಜ್ಯ

ಈಗಷ್ಟೇ ಅಲ್ಲ, ಪೂರ್ಣಾವಧಿಯವರೆಗೂ ಸಿದ್ದರಾಮಯ್ಯ ಅವರೇ ಸಿಎಂ: ಶಿವಾನಂದ ಪಾಟೀಲ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ ಬಗ್ಗೆ ಕೆಲ ಸಚಿವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರು ಸಿಎಂ ಆಗಿರುವ ಅವಶ್ಯಕತೆ ಇದೆ. ಆದರೆ ನಾನು ಸಿಎಂ ವಿಚಾರದಲ್ಲಿ ಭವಿಷ್ಯ ನುಡಿಯುವಂತಹನು ಅಲ್ಲ. ಅಲ್ಲದೇ ಮುಖ್ಯಮಂತ್ರಿ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಅಥವಾ ಬಿಡಬೇಕು ಎಂಬುದನ್ನು ಸಿಎಲ್‌ಪಿ ಮತ್ತು ನಮ್ಮ ಪಕ್ಷದ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದು ಹೇಳಿದರು.

ಈ ವರ್ಷ 5 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆ ಇದೆ

ರಾಜ್ಯಾದಾದ್ಯಂತ ಕಳೆದ ವರ್ಷ ಬರಗಾಲವಿದ್ದರಿಂದ ಇಳುವರಿ ಹಾಗೂ ಕಬ್ಬು ನುರಿಸುವಿಕೆ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಈ ವರ್ಷ ಕಬ್ಬು ನುರಿಸುವಿಕೆಯ ಪ್ರಮಾಣ ಕಡಿಮೆ ಇರಲಿದೆ. ಆದರೆ ಈ ವರ್ಷ 5 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆಯಿದ್ದು, ಮುಂದಿನ ವರ್ಷ ನಾವು ಕಬ್ಬು ನುರಿಸುವ ಪ್ರಮಾಣದಲ್ಲಿ ಗುರಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೆಲ ಸಕ್ಕರೆ ಕಾರ್ಖಾನೆಗಳು ಶೇ.80 ರಷ್ಟು ಕಬ್ಬಿನ್‌ ಬಿಲ್‌ ಪಾವತಿಸಿದ್ದರೆ, ಇನ್ನು ಕೆಲವು ಕಾರ್ಖಾನೆಗಳು ಶೇ.75 ರವರೆಗೆ ಪಾವತಿಸಿವೆ. ಅಲ್ಲದೇ ಒಂದು ಭಾಗ ಮಾತ್ರ ಶೇ.55 ರಿಂದ ಶೇ.60 ರಷ್ಟು ಪಾವತಿಸಿವೆ. ಹೀಗಾಗಿ ರೈತರ ಎಲ್ಲ ಬಾಕಿ ಬಿಲ್‌ಗಳು ಶೀಘ್ರವೇ ಪಾವತಿಯಾಗುತ್ತವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

27 mins ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

29 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

35 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago