ರಾಜ್ಯ

ಈಗಷ್ಟೇ ಅಲ್ಲ, ಪೂರ್ಣಾವಧಿಯವರೆಗೂ ಸಿದ್ದರಾಮಯ್ಯ ಅವರೇ ಸಿಎಂ: ಶಿವಾನಂದ ಪಾಟೀಲ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ ಬಗ್ಗೆ ಕೆಲ ಸಚಿವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರು ಸಿಎಂ ಆಗಿರುವ ಅವಶ್ಯಕತೆ ಇದೆ. ಆದರೆ ನಾನು ಸಿಎಂ ವಿಚಾರದಲ್ಲಿ ಭವಿಷ್ಯ ನುಡಿಯುವಂತಹನು ಅಲ್ಲ. ಅಲ್ಲದೇ ಮುಖ್ಯಮಂತ್ರಿ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಅಥವಾ ಬಿಡಬೇಕು ಎಂಬುದನ್ನು ಸಿಎಲ್‌ಪಿ ಮತ್ತು ನಮ್ಮ ಪಕ್ಷದ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದು ಹೇಳಿದರು.

ಈ ವರ್ಷ 5 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆ ಇದೆ

ರಾಜ್ಯಾದಾದ್ಯಂತ ಕಳೆದ ವರ್ಷ ಬರಗಾಲವಿದ್ದರಿಂದ ಇಳುವರಿ ಹಾಗೂ ಕಬ್ಬು ನುರಿಸುವಿಕೆ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಈ ವರ್ಷ ಕಬ್ಬು ನುರಿಸುವಿಕೆಯ ಪ್ರಮಾಣ ಕಡಿಮೆ ಇರಲಿದೆ. ಆದರೆ ಈ ವರ್ಷ 5 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ನುರಿಸುವ ನಿರೀಕ್ಷೆಯಿದ್ದು, ಮುಂದಿನ ವರ್ಷ ನಾವು ಕಬ್ಬು ನುರಿಸುವ ಪ್ರಮಾಣದಲ್ಲಿ ಗುರಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೆಲ ಸಕ್ಕರೆ ಕಾರ್ಖಾನೆಗಳು ಶೇ.80 ರಷ್ಟು ಕಬ್ಬಿನ್‌ ಬಿಲ್‌ ಪಾವತಿಸಿದ್ದರೆ, ಇನ್ನು ಕೆಲವು ಕಾರ್ಖಾನೆಗಳು ಶೇ.75 ರವರೆಗೆ ಪಾವತಿಸಿವೆ. ಅಲ್ಲದೇ ಒಂದು ಭಾಗ ಮಾತ್ರ ಶೇ.55 ರಿಂದ ಶೇ.60 ರಷ್ಟು ಪಾವತಿಸಿವೆ. ಹೀಗಾಗಿ ರೈತರ ಎಲ್ಲ ಬಾಕಿ ಬಿಲ್‌ಗಳು ಶೀಘ್ರವೇ ಪಾವತಿಯಾಗುತ್ತವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

6 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

6 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

6 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

6 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

7 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

7 hours ago