ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ ಬಗ್ಗೆ ಕೆಲ ಸಚಿವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರು ಸಿಎಂ ಆಗಿರುವ ಅವಶ್ಯಕತೆ ಇದೆ. ಆದರೆ ನಾನು ಸಿಎಂ ವಿಚಾರದಲ್ಲಿ ಭವಿಷ್ಯ ನುಡಿಯುವಂತಹನು ಅಲ್ಲ. ಅಲ್ಲದೇ ಮುಖ್ಯಮಂತ್ರಿ ಸ್ಥಾನದಲ್ಲಿ ಯಾರನ್ನು ಮುಂದುವರಿಸಬೇಕು ಅಥವಾ ಬಿಡಬೇಕು ಎಂಬುದನ್ನು ಸಿಎಲ್ಪಿ ಮತ್ತು ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದರು.
ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆ ಇದೆ
ರಾಜ್ಯಾದಾದ್ಯಂತ ಕಳೆದ ವರ್ಷ ಬರಗಾಲವಿದ್ದರಿಂದ ಇಳುವರಿ ಹಾಗೂ ಕಬ್ಬು ನುರಿಸುವಿಕೆ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ಈ ವರ್ಷ ಕಬ್ಬು ನುರಿಸುವಿಕೆಯ ಪ್ರಮಾಣ ಕಡಿಮೆ ಇರಲಿದೆ. ಆದರೆ ಈ ವರ್ಷ 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ನಿರೀಕ್ಷೆಯಿದ್ದು, ಮುಂದಿನ ವರ್ಷ ನಾವು ಕಬ್ಬು ನುರಿಸುವ ಪ್ರಮಾಣದಲ್ಲಿ ಗುರಿ ಮೀರುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೆಲ ಸಕ್ಕರೆ ಕಾರ್ಖಾನೆಗಳು ಶೇ.80 ರಷ್ಟು ಕಬ್ಬಿನ್ ಬಿಲ್ ಪಾವತಿಸಿದ್ದರೆ, ಇನ್ನು ಕೆಲವು ಕಾರ್ಖಾನೆಗಳು ಶೇ.75 ರವರೆಗೆ ಪಾವತಿಸಿವೆ. ಅಲ್ಲದೇ ಒಂದು ಭಾಗ ಮಾತ್ರ ಶೇ.55 ರಿಂದ ಶೇ.60 ರಷ್ಟು ಪಾವತಿಸಿವೆ. ಹೀಗಾಗಿ ರೈತರ ಎಲ್ಲ ಬಾಕಿ ಬಿಲ್ಗಳು ಶೀಘ್ರವೇ ಪಾವತಿಯಾಗುತ್ತವೆ ಎಂದು ಹೇಳಿದರು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…