ರಾಜ್ಯ

ಬೆಂಗಳೂರಲ್ಲಿ ಜೋರಾಯಿತು ಕನ್ನಡ ಜಾಗೃತಿ ಅಭಿಯಾನ; ಶಿವರಾಜ್‌ ತಂಗಡಗಿ ಪ್ರತಿಕ್ರಿಯೆ

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್‌, ದೊಡ್ಡ ಮತ್ತು ಸಣ್ಣ ಅಂಗಡಿಗಳ ಬೋರ್ಡ್‌ಗಳನ್ನು ಪುಡಿಗಟ್ಟಿ ಆಕ್ರೋಶಯುತವಾಗಿ ಹೋರಾಟವನ್ನು ಮಾಡಿದರು.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಮಾಲ್‌ ಆಫ್‌ ಏಷ್ಯಾ ಸೇರಿದಂತೆ ವಿವಿಧೆಡೆ ದೊಡ್ಡ ಮಟ್ಟದಲ್ಲಿ ಜಮಾಯಿಸಿ ಇಂಗ್ಲಿಷ್‌ ಬೋರ್ಡ್‌ ಹಾಗೂ ಜಾಹೀರಾತು ಬೋರ್ಡ್‌ಗಳನ್ನು ಹರಿದು ಹಾಕಿದರು. ಇನ್ನು ಮಾಲ್‌ ಆಫ್‌ ಏಷ್ಯಾ ಮುಂದೆ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತು. ಮಹಿಳಾ ಹೋರಾಟಗಾರ್ತಿಯರು ಮಾಲ್‌ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆಯಲು ಹರಸಾಹಸಪಟ್ಟರು. ಕೆಲಕಾಲ ಉಂಟಾದ ತಳ್ಳಾಟದ ಬಳಿಕ ಹೋರಾಟಗಾರರನ್ನು ವಶಕ್ಕೆ ಪಡೆದರು.

ಇನ್ನು ಈ ರೀತಿಯ ಹೋರಾಟಗಳು ನಡೆಯುತ್ತಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಿಂದುಗಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಹೋರಾಟಗಾರರು ಶಾಂತಿಯುತ ಹೋರಾಟವನ್ನು ಮಾತ್ರ ಮಾಡಬೇಕು, ಕನ್ನಡ ಫಲಕಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂಬ ಬಿಲ್‌ ಅನ್ನು ಈಗಾಗಲೇ ಅಧಿವೇಶನದಲ್ಲಿ ಪಾಸ್ ಮಾಡಲಾಗಿದೆ, ನಮ್ಮ ಇಲಾಖೆ ಸಹ ಕನ್ನಡಪರ ಸಂಘಟನೆಗಳ ಹಾಗೆ ಕೆಲಸ ಮಾಡಲಿದೆ ಎಂದು ಹೇಳಿಕೆಯನ್ನು ನೀಡಿದರು.

andolana

Recent Posts

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

57 mins ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

1 hour ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

2 hours ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…

3 hours ago