ರಾಜ್ಯ

ಬೆಂಗಳೂರಲ್ಲಿ ಜೋರಾಯಿತು ಕನ್ನಡ ಜಾಗೃತಿ ಅಭಿಯಾನ; ಶಿವರಾಜ್‌ ತಂಗಡಗಿ ಪ್ರತಿಕ್ರಿಯೆ

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್‌, ದೊಡ್ಡ ಮತ್ತು ಸಣ್ಣ ಅಂಗಡಿಗಳ ಬೋರ್ಡ್‌ಗಳನ್ನು ಪುಡಿಗಟ್ಟಿ ಆಕ್ರೋಶಯುತವಾಗಿ ಹೋರಾಟವನ್ನು ಮಾಡಿದರು.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಮಾಲ್‌ ಆಫ್‌ ಏಷ್ಯಾ ಸೇರಿದಂತೆ ವಿವಿಧೆಡೆ ದೊಡ್ಡ ಮಟ್ಟದಲ್ಲಿ ಜಮಾಯಿಸಿ ಇಂಗ್ಲಿಷ್‌ ಬೋರ್ಡ್‌ ಹಾಗೂ ಜಾಹೀರಾತು ಬೋರ್ಡ್‌ಗಳನ್ನು ಹರಿದು ಹಾಕಿದರು. ಇನ್ನು ಮಾಲ್‌ ಆಫ್‌ ಏಷ್ಯಾ ಮುಂದೆ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತು. ಮಹಿಳಾ ಹೋರಾಟಗಾರ್ತಿಯರು ಮಾಲ್‌ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆಯಲು ಹರಸಾಹಸಪಟ್ಟರು. ಕೆಲಕಾಲ ಉಂಟಾದ ತಳ್ಳಾಟದ ಬಳಿಕ ಹೋರಾಟಗಾರರನ್ನು ವಶಕ್ಕೆ ಪಡೆದರು.

ಇನ್ನು ಈ ರೀತಿಯ ಹೋರಾಟಗಳು ನಡೆಯುತ್ತಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಿಂದುಗಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಹೋರಾಟಗಾರರು ಶಾಂತಿಯುತ ಹೋರಾಟವನ್ನು ಮಾತ್ರ ಮಾಡಬೇಕು, ಕನ್ನಡ ಫಲಕಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂಬ ಬಿಲ್‌ ಅನ್ನು ಈಗಾಗಲೇ ಅಧಿವೇಶನದಲ್ಲಿ ಪಾಸ್ ಮಾಡಲಾಗಿದೆ, ನಮ್ಮ ಇಲಾಖೆ ಸಹ ಕನ್ನಡಪರ ಸಂಘಟನೆಗಳ ಹಾಗೆ ಕೆಲಸ ಮಾಡಲಿದೆ ಎಂದು ಹೇಳಿಕೆಯನ್ನು ನೀಡಿದರು.

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

22 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

22 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

22 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

22 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

22 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

22 hours ago