ರಾಜ್ಯ

ಬೆಂಗಳೂರಲ್ಲಿ ಜೋರಾಯಿತು ಕನ್ನಡ ಜಾಗೃತಿ ಅಭಿಯಾನ; ಶಿವರಾಜ್‌ ತಂಗಡಗಿ ಪ್ರತಿಕ್ರಿಯೆ

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್‌, ದೊಡ್ಡ ಮತ್ತು ಸಣ್ಣ ಅಂಗಡಿಗಳ ಬೋರ್ಡ್‌ಗಳನ್ನು ಪುಡಿಗಟ್ಟಿ ಆಕ್ರೋಶಯುತವಾಗಿ ಹೋರಾಟವನ್ನು ಮಾಡಿದರು.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಮಾಲ್‌ ಆಫ್‌ ಏಷ್ಯಾ ಸೇರಿದಂತೆ ವಿವಿಧೆಡೆ ದೊಡ್ಡ ಮಟ್ಟದಲ್ಲಿ ಜಮಾಯಿಸಿ ಇಂಗ್ಲಿಷ್‌ ಬೋರ್ಡ್‌ ಹಾಗೂ ಜಾಹೀರಾತು ಬೋರ್ಡ್‌ಗಳನ್ನು ಹರಿದು ಹಾಕಿದರು. ಇನ್ನು ಮಾಲ್‌ ಆಫ್‌ ಏಷ್ಯಾ ಮುಂದೆ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತು. ಮಹಿಳಾ ಹೋರಾಟಗಾರ್ತಿಯರು ಮಾಲ್‌ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆಯಲು ಹರಸಾಹಸಪಟ್ಟರು. ಕೆಲಕಾಲ ಉಂಟಾದ ತಳ್ಳಾಟದ ಬಳಿಕ ಹೋರಾಟಗಾರರನ್ನು ವಶಕ್ಕೆ ಪಡೆದರು.

ಇನ್ನು ಈ ರೀತಿಯ ಹೋರಾಟಗಳು ನಡೆಯುತ್ತಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಿಂದುಗಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಹೋರಾಟಗಾರರು ಶಾಂತಿಯುತ ಹೋರಾಟವನ್ನು ಮಾತ್ರ ಮಾಡಬೇಕು, ಕನ್ನಡ ಫಲಕಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂಬ ಬಿಲ್‌ ಅನ್ನು ಈಗಾಗಲೇ ಅಧಿವೇಶನದಲ್ಲಿ ಪಾಸ್ ಮಾಡಲಾಗಿದೆ, ನಮ್ಮ ಇಲಾಖೆ ಸಹ ಕನ್ನಡಪರ ಸಂಘಟನೆಗಳ ಹಾಗೆ ಕೆಲಸ ಮಾಡಲಿದೆ ಎಂದು ಹೇಳಿಕೆಯನ್ನು ನೀಡಿದರು.

andolana

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

42 mins ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

9 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

9 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

9 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

9 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

9 hours ago