ಬೆಂಗಳೂರು: ರಾಜ್ಯದ ಜನತೆ ಜಾತಿ ಗಣತಿ ವರದಿ ಬಗ್ಗೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.11) ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಸಚಿವ ಸಂಪುಟದಲ್ಲಿ ಜಾರಿಯಾಗಲಿರುವುದು ಜಾತಿ ಗಣತಿ ಅಲ್ಲ, ಅದೊಂದು ಸಾಮಾಜಿಕ-ಆರ್ಥಿಕ ಸಮೀಕ್ಷೆಯಾಗಿದೆ. ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ನಂತರ ಟ್ರಜೋರಿಯಲ್ಲಿ ಇಟ್ಟಿದ್ದವು. ವರದಿಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಜಾತಿಗಣತಿ ವರದಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದರು.
ಜಾತಿ ಗಣತಿ ವರದಿಯ ಬಗ್ಗೆ ಯಾರೂ ಆತಂಕಪಡುವವ ಅವಶ್ಯಕತೆ ಇಲ್ಲ. ಇದು ಜನರ ಸಮೀಕ್ಷೆ, ಜಾತಿ ಸಮೀಕ್ಷೆ ಅಲ್ಲ. ವರದಿ ಕುರಿತು ಸಂಪುಟದಲ್ಲಿ ಚರ್ಚೆಯಾದ ಬಳಿಕ ಮಾತನಾಡುತ್ತೇನೆ. ಆದರೆ ಈಗ ಬರುತ್ತಿರುವ ಅಂಕಿ-ಅಂಶಗಳು ಊಹಾಪೋಹಗಳು ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…