ಹಾವೇರಿ : ಇತ್ತೀಚೆಗೆ ಹಾವೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ೧೩ ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮಕ್ಕೆ ಇಂದು ನಟ ಶಿವರಾಜಕುಮಾರ್ ದಂಪತಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನದ ಜೊತೆಗೆ ಧನ ಸಹಾಯ ಮಾಡಿದ್ದಾರೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಹೋಗಿ ಟಿಟಿ ವಾಹನ ಡಿಕ್ಕಿಹೊಡೆದ ಪರಿಣಾಮ ಎಮ್ಮಿಹಟ್ಟಿ ಗ್ರಾಮದ ೧೩ ಮಂದಿ ಸಾವನ್ನಪ್ಪಿದ್ದರು. ಈಗಾಗಿ ಮೃತರ ಕುಟುಂಬಸ್ಥರು ನೋವಿನ ಜೊತೆಗೆ ಸಂಕಷ್ಟದಲ್ಲಿರುವುದರಿಂದ ಶಿವಣ್ಣ ದಂಪತಿ ಭೇಟಿ ನೀಡಿ , ʻನಿಮ್ಮ ಜೊತೆ ನಾವಿದ್ದೇವೆ. ನಿಮ್ಮ ಕಷ್ಟಕ್ಕೆ ನಾವು ಜೊತೆಯಾಗಿ ನಿಲ್ಲುತ್ತೇವೆʼ ಎಂದು ಸಾಂತ್ವನ ಹೇಳಿದರು. ಅಲ್ಲದೆ ಕುಟುಂಬಸ್ಥರಿಗೆ ಹಣ ಸಹಾಯ ಮಾಡುವ ಮೂಲಕ ನೆರವಾದರು. ಇನ್ನು ಶಿವಣ್ಣ ದಂಪತಿಯ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ.
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…
ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…
ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…