ರಾಜ್ಯ

ವೀರಪ್ಪನ್‌ ತಮ್ಮ ತಂದೆಯನ್ನು ಅಪಹರಿಸಿದಾಗ ಎಸ್‌ಎಂಕೆ ಮಾಡಿದ ಸಹಾಯ ಮರೆಯಲು ಅಸಾಧ್ಯ: ಶಿವರಾಜ್‌ಕುಮಾರ್‌

ಬೆಂಗಳೂರು: ವೀರಪ್ಪನ್‌ ತಮ್ಮ ತಂದೆ ಡಾ.ರಾಜ್‌ ಕುಮಾರ್‌ ಅವರನ್ನು ಅಪಹರಿಸಿದಾಗ ಅಂದಿನ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್‌.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ.

ಸದಾಶಿವನಗರದಲ್ಲಿ ಇಂದು(ಡಿ.10) ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್‌.ಎಂ.ಕೃಷ್ಣ ಅವರು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರದವರಾಗಿದ್ದರು. ತಮ್ಮ ತಂದೆಯನ್ನು ವೀರಪ್ಪನ್‌ ಅಪಹರಣ ಮಾಡಿದಾಗ ಎಸ್‌.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ. ಅವರ 93 ವರ್ಷದ ಜೀವನ ಸಾರ್ಥಕವಾಗಿದ್ದು, ಅತ್ಯಾಧುನಿಕ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಅವರ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂಬರೀಶ್‌ ಮತ್ತೆ ಕಾಂಗ್ರೆಸ್‌ಗೆ ತೆರಳಲು ಎಸ್‌.ಎಂ.ಕೃಷ್ಣ ಕಾರಣ: ಮಾಜಿ ಸಂಸದೆ ಸುಮಲತಾ

ಇದೇ ಸಂದರ್ಭದಲ್ಲಿ ಮಾಜಿ ಸಂಸದೆ ಸುಮಲತಾ ಅವರು ಮಾತನಾಡಿ, ಅಂಬರೀಶ್‌ ಅವರು ಮತ್ತೆ ಕಾಂಗ್ರೆಸ್‌ಗೆ ತೆರಳಲು ಎಸ್‌.ಎಂ.ಕೃಷ್ಣ ಕಾರಣವಾಗಿದ್ದಾರೆ. ನಾನು ರಾಜಕೀಯ ಜೀವನ ಪ್ರಾರಂಭ ಮಾಡುವ ಮುನ್ನ ಎಸ್‌ಎಂಕೆ ಅವರ ಆರ್ಶೀವಾದ ಪಡೆದಿದ್ದೆ. ಎಸ್‌.ಎಂ.ಕೃಷ್ಣರವರು ನಮ್ಮ ಮಂಡ್ಯದ ಮಣ್ಣಿನ ಮಗರಾಗಿದ್ದು, ಡಿಗ್ನಿಫೈಡ್‌ ಪೊಲಿಟಿಷಿಯನ್‌ ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ. ಎಸ್‌ಎಂಕೆ ಅವರಂತಹ ರಾಜಕಾರಣಿಗಳನ್ನು ಇಂದಿನ ರಾಜಕಾರಣದಲ್ಲಿ ನೋಡಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಇನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್‌.ಎಂ.ಕೃಷ್ಣ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ನಾವಿಬ್ಬರೂ ಸೇರಿ ರಾಜ್ಯಕ್ಕೆ ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೇವೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳು ಜಾರಿಯಾಗುವುದಕ್ಕೆ ಎಸ್.ಎಂ.ಕೃಷ್ಣ ಅವರೇ ಮುಖ್ಯ ಕಾರಣರಾಗಿದ್ದಾರೆ. ಆದರೆ ಇಂದು ಅವರ ಅಗಲಿಕೆ ನಮಗೆಲ್ಲಾ ಅಪಾರ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

20 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago