ರಾಜ್ಯ

ವೀರಪ್ಪನ್‌ ತಮ್ಮ ತಂದೆಯನ್ನು ಅಪಹರಿಸಿದಾಗ ಎಸ್‌ಎಂಕೆ ಮಾಡಿದ ಸಹಾಯ ಮರೆಯಲು ಅಸಾಧ್ಯ: ಶಿವರಾಜ್‌ಕುಮಾರ್‌

ಬೆಂಗಳೂರು: ವೀರಪ್ಪನ್‌ ತಮ್ಮ ತಂದೆ ಡಾ.ರಾಜ್‌ ಕುಮಾರ್‌ ಅವರನ್ನು ಅಪಹರಿಸಿದಾಗ ಅಂದಿನ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್‌.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ.

ಸದಾಶಿವನಗರದಲ್ಲಿ ಇಂದು(ಡಿ.10) ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್‌.ಎಂ.ಕೃಷ್ಣ ಅವರು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರದವರಾಗಿದ್ದರು. ತಮ್ಮ ತಂದೆಯನ್ನು ವೀರಪ್ಪನ್‌ ಅಪಹರಣ ಮಾಡಿದಾಗ ಎಸ್‌.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ. ಅವರ 93 ವರ್ಷದ ಜೀವನ ಸಾರ್ಥಕವಾಗಿದ್ದು, ಅತ್ಯಾಧುನಿಕ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಅವರ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂಬರೀಶ್‌ ಮತ್ತೆ ಕಾಂಗ್ರೆಸ್‌ಗೆ ತೆರಳಲು ಎಸ್‌.ಎಂ.ಕೃಷ್ಣ ಕಾರಣ: ಮಾಜಿ ಸಂಸದೆ ಸುಮಲತಾ

ಇದೇ ಸಂದರ್ಭದಲ್ಲಿ ಮಾಜಿ ಸಂಸದೆ ಸುಮಲತಾ ಅವರು ಮಾತನಾಡಿ, ಅಂಬರೀಶ್‌ ಅವರು ಮತ್ತೆ ಕಾಂಗ್ರೆಸ್‌ಗೆ ತೆರಳಲು ಎಸ್‌.ಎಂ.ಕೃಷ್ಣ ಕಾರಣವಾಗಿದ್ದಾರೆ. ನಾನು ರಾಜಕೀಯ ಜೀವನ ಪ್ರಾರಂಭ ಮಾಡುವ ಮುನ್ನ ಎಸ್‌ಎಂಕೆ ಅವರ ಆರ್ಶೀವಾದ ಪಡೆದಿದ್ದೆ. ಎಸ್‌.ಎಂ.ಕೃಷ್ಣರವರು ನಮ್ಮ ಮಂಡ್ಯದ ಮಣ್ಣಿನ ಮಗರಾಗಿದ್ದು, ಡಿಗ್ನಿಫೈಡ್‌ ಪೊಲಿಟಿಷಿಯನ್‌ ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ. ಎಸ್‌ಎಂಕೆ ಅವರಂತಹ ರಾಜಕಾರಣಿಗಳನ್ನು ಇಂದಿನ ರಾಜಕಾರಣದಲ್ಲಿ ನೋಡಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಇನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್‌.ಎಂ.ಕೃಷ್ಣ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ನಾವಿಬ್ಬರೂ ಸೇರಿ ರಾಜ್ಯಕ್ಕೆ ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೇವೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳು ಜಾರಿಯಾಗುವುದಕ್ಕೆ ಎಸ್.ಎಂ.ಕೃಷ್ಣ ಅವರೇ ಮುಖ್ಯ ಕಾರಣರಾಗಿದ್ದಾರೆ. ಆದರೆ ಇಂದು ಅವರ ಅಗಲಿಕೆ ನಮಗೆಲ್ಲಾ ಅಪಾರ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago