ರಾಜ್ಯ

ವೀರಪ್ಪನ್‌ ತಮ್ಮ ತಂದೆಯನ್ನು ಅಪಹರಿಸಿದಾಗ ಎಸ್‌ಎಂಕೆ ಮಾಡಿದ ಸಹಾಯ ಮರೆಯಲು ಅಸಾಧ್ಯ: ಶಿವರಾಜ್‌ಕುಮಾರ್‌

ಬೆಂಗಳೂರು: ವೀರಪ್ಪನ್‌ ತಮ್ಮ ತಂದೆ ಡಾ.ರಾಜ್‌ ಕುಮಾರ್‌ ಅವರನ್ನು ಅಪಹರಿಸಿದಾಗ ಅಂದಿನ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್‌.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದ್ದಾರೆ.

ಸದಾಶಿವನಗರದಲ್ಲಿ ಇಂದು(ಡಿ.10) ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಸ್‌.ಎಂ.ಕೃಷ್ಣ ಅವರು ನಮ್ಮ ಕುಟುಂಬಕ್ಕೆ ತುಂಬಾ ಹತ್ತಿರದವರಾಗಿದ್ದರು. ತಮ್ಮ ತಂದೆಯನ್ನು ವೀರಪ್ಪನ್‌ ಅಪಹರಣ ಮಾಡಿದಾಗ ಎಸ್‌.ಎಂ.ಕೃಷ್ಣ ಅವರು ಮಾಡಿದ ಸಹಾಯವನ್ನು ಮರೆಯಲು ಸಾಧ್ಯವಿಲ್ಲ. ಅವರ 93 ವರ್ಷದ ಜೀವನ ಸಾರ್ಥಕವಾಗಿದ್ದು, ಅತ್ಯಾಧುನಿಕ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದರು. ಹೀಗಾಗಿ ಅವರ ಕುಟುಂಬ ವರ್ಗದವರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂಬರೀಶ್‌ ಮತ್ತೆ ಕಾಂಗ್ರೆಸ್‌ಗೆ ತೆರಳಲು ಎಸ್‌.ಎಂ.ಕೃಷ್ಣ ಕಾರಣ: ಮಾಜಿ ಸಂಸದೆ ಸುಮಲತಾ

ಇದೇ ಸಂದರ್ಭದಲ್ಲಿ ಮಾಜಿ ಸಂಸದೆ ಸುಮಲತಾ ಅವರು ಮಾತನಾಡಿ, ಅಂಬರೀಶ್‌ ಅವರು ಮತ್ತೆ ಕಾಂಗ್ರೆಸ್‌ಗೆ ತೆರಳಲು ಎಸ್‌.ಎಂ.ಕೃಷ್ಣ ಕಾರಣವಾಗಿದ್ದಾರೆ. ನಾನು ರಾಜಕೀಯ ಜೀವನ ಪ್ರಾರಂಭ ಮಾಡುವ ಮುನ್ನ ಎಸ್‌ಎಂಕೆ ಅವರ ಆರ್ಶೀವಾದ ಪಡೆದಿದ್ದೆ. ಎಸ್‌.ಎಂ.ಕೃಷ್ಣರವರು ನಮ್ಮ ಮಂಡ್ಯದ ಮಣ್ಣಿನ ಮಗರಾಗಿದ್ದು, ಡಿಗ್ನಿಫೈಡ್‌ ಪೊಲಿಟಿಷಿಯನ್‌ ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ. ಎಸ್‌ಎಂಕೆ ಅವರಂತಹ ರಾಜಕಾರಣಿಗಳನ್ನು ಇಂದಿನ ರಾಜಕಾರಣದಲ್ಲಿ ನೋಡಲು ಸಾಧ್ಯವೇ ಇಲ್ಲ ಎಂದಿದ್ದಾರೆ.

ಇನ್ನು ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಾತನಾಡಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್‌.ಎಂ.ಕೃಷ್ಣ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ನಾವಿಬ್ಬರೂ ಸೇರಿ ರಾಜ್ಯಕ್ಕೆ ಅಭಿವೃದ್ಧಿ ಯೋಜನೆಗಳನ್ನು ತಂದಿದ್ದೇವೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳು ಜಾರಿಯಾಗುವುದಕ್ಕೆ ಎಸ್.ಎಂ.ಕೃಷ್ಣ ಅವರೇ ಮುಖ್ಯ ಕಾರಣರಾಗಿದ್ದಾರೆ. ಆದರೆ ಇಂದು ಅವರ ಅಗಲಿಕೆ ನಮಗೆಲ್ಲಾ ಅಪಾರ ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago