ರಾಜ್ಯ

ಪ್ರೊ.ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಯ ವೈದ್ಯರ ಜೊತೆ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವರು ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ವೈದ್ಯರಿಗೆ ಸೂಚಿಸಿದರು.

ಬಳಿಕ ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರು ಧೈರ್ಯ ಹೇಳಿ, ಪ್ರೊ.ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ನಮಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

9 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

9 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

9 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

10 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

12 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago