Shivraj Tangadagi inquired Doddarangegowda health
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯ ವೈದ್ಯರ ಜೊತೆ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಚಿವರು ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ವೈದ್ಯರಿಗೆ ಸೂಚಿಸಿದರು.
ಬಳಿಕ ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರು ಧೈರ್ಯ ಹೇಳಿ, ಪ್ರೊ.ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ನಮಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…