ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮೊದಲು ತಜ್ಞರೊಂದಿಗೆ ಚರ್ಚಿಸಿದ ಬಳಿಕವೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಕಾನೂನಿನಡಿ ಎಲ್ಲರೂ ಒಂದೇ. ಯಾರೇ ಆದರೂ ಕಾನೂನು ಎದುರಿಸಬೇಕು. ಹಾಗಾಗಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ಕಳೆದ 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣ ಲೋಕಾಯುಕ್ತದಲ್ಲಿದ್ದವು. ತನ್ನನ್ನು ತಾನು ರಕ್ಷಿಸಿಕೊಳ್ಳಲು ಲೋಕಾಯುಕ್ತವನ್ನೇ ದುರ್ಬಲ ಮಾಡಿದ್ದರು. ಎಸಿಬಿಗೆ ವರ್ಗಾಯಿಸಿ ಪ್ರಕರಣ ಮುಚ್ಚಿ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಒಂದು ವರ್ಷದಲ್ಲೇ ಸಿಎಂ ಸಿದ್ದರಾಮಯ್ಯರ ಮೇಲೆ ಎರಡು ಆರೋಪಗಳಿವೆ. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿಯ ಭ್ರಷ್ಟಾಚಾರದ ಆರೋಪವಿದೆ.
ಮುಡಾ ಪ್ರಕರಣದಲ್ಲಿ ದಲಿತರ ಜಮೀನನ್ನು ತೆಗೆದುಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸಿಎಂ ಪತ್ನಿ ನಿವೇಶನ ಪಡೆದಿದ್ದಾರೆ. ಎಲ್ಲಾ ಕಾಲದಲ್ಲೂ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದ ಸಿದ್ದರಾಮಯ್ಯ ಪ್ರಕರಣವನ್ನು ಮುಚ್ಚಿಹಾಕಲು ದೇಸಾಯಿ ಸಮಿತಿ ರಚಿಸಿದ್ದಾರೆ ಎಂದು ದೂರಿದರು.
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…
ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…