ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ರಕ್ಷಿಸಲು ಸಚಿವರೆಲ್ಲಾ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮೊದಲು ತಜ್ಞರೊಂದಿಗೆ ಚರ್ಚಿಸಿದ ಬಳಿಕವೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಕಾನೂನಿನಡಿ ಎಲ್ಲರೂ ಒಂದೇ. ಯಾರೇ ಆದರೂ ಕಾನೂನು ಎದುರಿಸಬೇಕು. ಹಾಗಾಗಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು ಕಳೆದ 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣ ಲೋಕಾಯುಕ್ತದಲ್ಲಿದ್ದವು. ತನ್ನನ್ನು ತಾನು ರಕ್ಷಿಸಿಕೊಳ್ಳಲು ಲೋಕಾಯುಕ್ತವನ್ನೇ ದುರ್ಬಲ ಮಾಡಿದ್ದರು. ಎಸಿಬಿಗೆ ವರ್ಗಾಯಿಸಿ ಪ್ರಕರಣ ಮುಚ್ಚಿ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಒಂದು ವರ್ಷದಲ್ಲೇ ಸಿಎಂ ಸಿದ್ದರಾಮಯ್ಯರ ಮೇಲೆ ಎರಡು ಆರೋಪಗಳಿವೆ. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿಯ ಭ್ರಷ್ಟಾಚಾರದ ಆರೋಪವಿದೆ.
ಮುಡಾ ಪ್ರಕರಣದಲ್ಲಿ ದಲಿತರ ಜಮೀನನ್ನು ತೆಗೆದುಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸಿಎಂ ಪತ್ನಿ ನಿವೇಶನ ಪಡೆದಿದ್ದಾರೆ. ಎಲ್ಲಾ ಕಾಲದಲ್ಲೂ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದ ಸಿದ್ದರಾಮಯ್ಯ ಪ್ರಕರಣವನ್ನು ಮುಚ್ಚಿಹಾಕಲು ದೇಸಾಯಿ ಸಮಿತಿ ರಚಿಸಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…