ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂಬ ಸಚಿವ ಭೈರತಿ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಭಾರತದಲ್ಲಿ ಕೌರವರನ್ನು ಶಕುನಿ ಮುಗಿಸಿದ ಹಾಗೇ ಸಿಎಂ ಸಿದ್ದರಾಮಯ್ಯರನ್ನು ಮುಗಿಸಲು ಸಚಿವ ಭೈರತಿ ಸುರೇಶ್ ಪಣತೊಟ್ಟಿದ್ದಾರೆ. ಭೈರತಿ ಸುರೇಶ್ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಪ್ಪು ಮಾಡಿದ್ದಾರೆ. ಆ ಭಯದಿಂದ ನನ್ನ ಮೇಲೆ ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆ ಸುರೇಶ್ ಅವರೇ ಕಾರಣ ಅಂತ ಜನರು ಮಾತನಾಡುತ್ತಿದ್ದಾರೆ. ನಾನು ಆ ಮಾತನ್ನು ಹೇಳಲಾ? ಮಾತಾಡುವ ಮುಂಚೆ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡಬೇಕು. ಇವರೇ ಸಿಎಂ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಕಳಂಕ ತಂದಿದ್ದಾರೆ. ಹೀಗಾಗಿರುವ ಭೈರತಿ ಸುರೇಶ್ ನನ್ನ ಬಗ್ಗೆ ಮಾತನಾಡಿ ಕೆಳಮಟ್ಟದ ರಾಜಕಾರಣ ಮಾಡುವುದನ್ನು ಬಿಡಬೇಕು ಎಂದು ಕಿಡಿಕಾರಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…