Shobha Karandlaje
ಬೆಂಗಳೂರು: ದೇಶಕ್ಕೆ ಸಂಕಷ್ಟ ಬಂದಾಗ ದೇಶದ ಜೊತೆ ಕಾಂಗ್ರೆಸ್ ನಿಲ್ಲಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಕದನ ವಿರಾಮಕ್ಕೆ ಒಪ್ಪಿದ ಕೇಂದ್ರ ಸರ್ಕಾರದ ನಡೆಯನ್ನು ಕಾಂಗ್ರೆಸ್ ನಾಯಕರು ಟೀಕಿಸುತ್ತಿರುವ ಬಗ್ಗೆ ಕಿಡಿಕಾರಿದರು.
ಕಾಂಗ್ರೆಸ್ ರಕ್ತವೆಲ್ಲಾ ಬರೀ ದೇಶ ವಿರೋಧಿ ರಕ್ತ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಕಾಂಗ್ರೆಸ್ನವರು ಜೋಕ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದೇಶದ ಜೊತೆ ನಿಂತು, ಸೈನಿಕರಿಗೆ ಬೆಂಬಲ ಕೊಡಬೇಕಿತ್ತು. ಇದನ್ನು ಮಾಡಲು ಆಗದಿದ್ದರೆ ಬಾಯಿ ಮುಚ್ಚಿಕೊಂಡು ಇರಬೇಕಿತ್ತು ಎಂದು ಕಿಡಿಕಾರಿದರು.
ಇನ್ನು ಪಾಕಿಸ್ತಾನ ಬಹಿರಂಗವಾಗಿಯೇ ಉಗ್ರರ ಕುಟುಂಬಗಳಿಗೆ ಪರಿಹಾರ ಕೊಟ್ಟಿದೆ. ಇದನ್ನು ನೋಡಿಯಾದರೂ ಕಾಂಗ್ರೆಸ್ ಸುಮ್ಮನಿರಬೇಕಿತ್ತು. ಕಾಂಗ್ರೆಸ್ ನಾಯಕ ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ಮಾತನಾಡುತ್ತಾರೆ. ಕೇಂದ್ರ ಸರ್ಕಾರವನ್ನು ತೆಗೆಯುವುದು ಹೇಗೆ ಎಂದು ಚರ್ಚೆ ನಡೆಸುತ್ತಾರೆ. ಕಾಂಗ್ರೆಸ್ ಮಾನಸಿಕತೆ ದೇಶದ ಜನರಿಗೆ ಗೊತ್ತಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…