ರಾಜ್ಯ

ಶೋಭಾ ಕರಂದ್ಲಾಜೆಗೆ ಹುಟ್ಟುಹಬ್ಬದ ಸಂಭ್ರಮ : ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

ಮೈಸೂರು : ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅರಮನೆ ಆವರಣದಲ್ಲಿ ಕಾವಾಡಿಗರಿಗೆ ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸಿ ವಿಭಿನ್ನ ರೀತಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ವಿಶ್ವ ವಿಖ್ಯಾತ ಮೈಸೂರಿನಲ್ಲಿ ದಸರಾ ಮಹೋತ್ಸವ ನಡೆಯುತ್ತಿದೆ. ಇಲ್ಲಿನ ಮಾವುತರು ಮತ್ತು ಕಾವಾಡಿಗಳಿಗೆ ಸ್ವತಃ ಶೋಭಾ ಕರಂದ್ಲಾಜೆ ಉಪಾಹಾರ ಬಡಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅರಮನೆ ಆವರಣದಲ್ಲಿ ಉಪಾಹಾರಕ್ಕೆ ವ್ಯವಸ್ಥೆ ಮಾಡಿದ್ದು, ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿದೆ. ಇಷ್ಟುಮಾತ್ರವಲ್ಲದೇ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಶೋಭಾ ಆಚರಿಸಿಕೊಂಡಿದ್ದು, ಸಚಿವೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂಬ ಬೆನ್ನಲ್ಲೇ ಕೇಂದ್ರ ಗೃಹ ಸಚಿವರಿಂದ ಶೋಭಾ ಕರಂದ್ಲಾಜೆಗೆ ಫೋನ್ ಬಂದಿದೆ. ಹುಟ್ಟುಹಬ್ಬ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೋಭಾ ಕರಂದ್ಲಾಜೆಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇನ್ನು ಮೈಸೂರಿನಲ್ಲಿ ಶೋಭಾ ಕರಂದ್ಲಾಜೆಗೆ ಸಂಸದ ಪ್ರತಾಪ್ ಸಿಂಹ ವಿಶ್ ಮಾಡಿ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ. ಅಲ್ಲದೇ ರಾಜ್ಯ ರಾಜಕಾರಣಕ್ಕೆ ಆದಷ್ಟು ಬೇಗ ಬನ್ನಿ ಮೇಡಂ. ನಿಮಗೆ ರಾಜ್ಯದಲ್ಲಿ ಒಳ್ಳೆಯ ಹುದ್ದೆ ಸಿಗಲಿ ಎಂದು ಹಾರೈಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರದ್ಲಾಂಜೆ, ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ಅಲ್ಲಿಯೇ ಇರುತ್ತೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ. ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಯಾವ ವರಿಷ್ಠರಿಂದಲೂ ನನಗೆ ಯಾವ ಸೂಚನೆಗಳು ಇಲ್ಲ. ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೂ ನನಗೆ ಗೊತ್ತಿಲ್ಲ. ಮುಂದಿನ ಬಾರಿಯೂ ಮೋದಿ ಪ್ರಧಾನಿಯಾಗಬೇಕು ಎಂಬುದು ನನ್ನ ಇಚ್ಛೆ. ಅದನ್ನೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago