ಬೆಂಗಳೂರು: ವಿಶ್ವದ ನಾಯಕರು ಕೋರಿಕೆ ಇಟ್ಟಾಗ ನಾವು ಅದನ್ನು ಪಾಲಿಸಬೇಕಾಗುತ್ತದೆ ಎಂದು ಕದನ ವಿರಾಮದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಶ್ವದ ಜೊತೆ ಹೋಗುತ್ತಿದ್ದೇವೆ, ವಿಶ್ವದ ಮಾತು ಕೇಳಿದ್ದೇವೆ. ಆದರೆ ಪಾಕಿಸ್ತಾನ ಕೇಳಿಲ್ಲ ಎಂದರು.
ಪಾಕಿಸ್ತಾನದ ನಡೆಯನ್ನು ಇಡೀ ವಿಶ್ವವೇ ನೋಡಿದೆ. ಈಗ ವಿಶ್ವವೇ ಯೋಚಿಸಬೇಕು. ನಾವು ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ವಿ. ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ನಮ್ಮ ಸೈನಿಕರು ಸರ್ವನಾಶ ಮಾಡಿದ್ದಾರೆ. ನಮ್ಮ ಪ್ರತೀಕಾರವನ್ನು ನಾವು ಗಡಿಯಲ್ಲಿ ತೋರಿಸುತ್ತಲೇ ಬಂದಿದ್ದೇವೆ ಎಂದು ಹೇಳಿದರು.
ನಮ್ಮ ದಾಳಿಗೆ ಹೆದರಿ ಪಾಕಿಸ್ತಾನವು ಅಮೇರಿಕಾ ಹಾಗೂ ಬೇರೆ ಬೇರೆ ದೇಶಗಳ ಕಾಲು ಹಿಡಿದುಕೊಂಡು, ಈ ಯುದ್ಧ ನಿಲ್ಲಿಸಬೇಕು. ಯುದ್ಧ ಮುಂದುವರಿಸುವ ಶಕ್ತಿ ನಮಗಿಲ್ಲ ಎಂದು ಕೇಳಿಕೊಂಡಿತ್ತು. ಅಮೇರಿಕಾ ಮಧ್ಯಸ್ಥಿಕೆ ಮೂಲಕ ಕದನ ವಿರಾಮ ನಂತರವು ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ನಾವು ದೇಶಕ್ಕಾಗಿ ನಡಿಗೆ ಮಾಡಿದ್ದೇವೆ. ನಮ್ಮ ಸೈನಿಕ ಪರ ಇಡೀ ದೇಶವೇ ನಿಂತಿದೆ. ತಿನ್ನೋಕೆ, ಕುಡಿಯೋಕೆ ಇಲ್ಲದ ದೇಶ ಪಾಕಿಸ್ತಾನ ನಿರಂತರ ತೊಂದರೆ ಕೊಡುತ್ತಿದೆ ಇದು ನಿಲ್ಲಬೇಕು ಎಂದು ಹೇಳಿದರು.
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…