ಬೆಂಗಳೂರು: ವಿಶ್ವದ ನಾಯಕರು ಕೋರಿಕೆ ಇಟ್ಟಾಗ ನಾವು ಅದನ್ನು ಪಾಲಿಸಬೇಕಾಗುತ್ತದೆ ಎಂದು ಕದನ ವಿರಾಮದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಶ್ವದ ಜೊತೆ ಹೋಗುತ್ತಿದ್ದೇವೆ, ವಿಶ್ವದ ಮಾತು ಕೇಳಿದ್ದೇವೆ. ಆದರೆ ಪಾಕಿಸ್ತಾನ ಕೇಳಿಲ್ಲ ಎಂದರು.
ಪಾಕಿಸ್ತಾನದ ನಡೆಯನ್ನು ಇಡೀ ವಿಶ್ವವೇ ನೋಡಿದೆ. ಈಗ ವಿಶ್ವವೇ ಯೋಚಿಸಬೇಕು. ನಾವು ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ವಿ. ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ನಮ್ಮ ಸೈನಿಕರು ಸರ್ವನಾಶ ಮಾಡಿದ್ದಾರೆ. ನಮ್ಮ ಪ್ರತೀಕಾರವನ್ನು ನಾವು ಗಡಿಯಲ್ಲಿ ತೋರಿಸುತ್ತಲೇ ಬಂದಿದ್ದೇವೆ ಎಂದು ಹೇಳಿದರು.
ನಮ್ಮ ದಾಳಿಗೆ ಹೆದರಿ ಪಾಕಿಸ್ತಾನವು ಅಮೇರಿಕಾ ಹಾಗೂ ಬೇರೆ ಬೇರೆ ದೇಶಗಳ ಕಾಲು ಹಿಡಿದುಕೊಂಡು, ಈ ಯುದ್ಧ ನಿಲ್ಲಿಸಬೇಕು. ಯುದ್ಧ ಮುಂದುವರಿಸುವ ಶಕ್ತಿ ನಮಗಿಲ್ಲ ಎಂದು ಕೇಳಿಕೊಂಡಿತ್ತು. ಅಮೇರಿಕಾ ಮಧ್ಯಸ್ಥಿಕೆ ಮೂಲಕ ಕದನ ವಿರಾಮ ನಂತರವು ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ನಾವು ದೇಶಕ್ಕಾಗಿ ನಡಿಗೆ ಮಾಡಿದ್ದೇವೆ. ನಮ್ಮ ಸೈನಿಕ ಪರ ಇಡೀ ದೇಶವೇ ನಿಂತಿದೆ. ತಿನ್ನೋಕೆ, ಕುಡಿಯೋಕೆ ಇಲ್ಲದ ದೇಶ ಪಾಕಿಸ್ತಾನ ನಿರಂತರ ತೊಂದರೆ ಕೊಡುತ್ತಿದೆ ಇದು ನಿಲ್ಲಬೇಕು ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…