Categories: ರಾಜ್ಯ

ನಾವು ವಿಶ್ವದ ಮಾತು ಕೇಳಿದ್ದೇವೆ, ಆದರೆ ಪಾಕಿಸ್ತಾನ ಕೇಳಿಲ್ಲ: ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು: ವಿಶ್ವದ ನಾಯಕರು ಕೋರಿಕೆ ಇಟ್ಟಾಗ ನಾವು ಅದನ್ನು ಪಾಲಿಸಬೇಕಾಗುತ್ತದೆ ಎಂದು ಕದನ ವಿರಾಮದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ವಿಶ್ವದ ಜೊತೆ ಹೋಗುತ್ತಿದ್ದೇವೆ, ವಿಶ್ವದ ಮಾತು ಕೇಳಿದ್ದೇವೆ. ಆದರೆ ಪಾಕಿಸ್ತಾನ ಕೇಳಿಲ್ಲ ಎಂದರು.

ಪಾಕಿಸ್ತಾನದ ನಡೆಯನ್ನು ಇಡೀ ವಿಶ್ವವೇ ನೋಡಿದೆ. ಈಗ ವಿಶ್ವವೇ ಯೋಚಿಸಬೇಕು. ನಾವು ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ವಿ. ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ನಮ್ಮ ಸೈನಿಕರು ಸರ್ವನಾಶ ಮಾಡಿದ್ದಾರೆ. ನಮ್ಮ ಪ್ರತೀಕಾರವನ್ನು ನಾವು ಗಡಿಯಲ್ಲಿ ತೋರಿಸುತ್ತಲೇ ಬಂದಿದ್ದೇವೆ ಎಂದು ಹೇಳಿದರು.

ನಮ್ಮ ದಾಳಿಗೆ ಹೆದರಿ ಪಾಕಿಸ್ತಾನವು ಅಮೇರಿಕಾ ಹಾಗೂ ಬೇರೆ ಬೇರೆ ದೇಶಗಳ ಕಾಲು ಹಿಡಿದುಕೊಂಡು, ಈ ಯುದ್ಧ ನಿಲ್ಲಿಸಬೇಕು. ಯುದ್ಧ ಮುಂದುವರಿಸುವ ಶಕ್ತಿ ನಮಗಿಲ್ಲ ಎಂದು ಕೇಳಿಕೊಂಡಿತ್ತು. ಅಮೇರಿಕಾ ಮಧ್ಯಸ್ಥಿಕೆ ಮೂಲಕ ಕದನ ವಿರಾಮ ನಂತರವು ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ನಾವು ದೇಶಕ್ಕಾಗಿ ನಡಿಗೆ ಮಾಡಿದ್ದೇವೆ. ನಮ್ಮ ಸೈನಿಕ ಪರ ಇಡೀ ದೇಶವೇ ನಿಂತಿದೆ. ತಿನ್ನೋಕೆ, ಕುಡಿಯೋಕೆ ಇಲ್ಲದ ದೇಶ ಪಾಕಿಸ್ತಾನ ನಿರಂತರ ತೊಂದರೆ ಕೊಡುತ್ತಿದೆ ಇದು ನಿಲ್ಲಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

48 mins ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

2 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

3 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago