ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ.
ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ.
ನಿಖಿಲ್ಗೆ ಆಘಾತ: ಆರಂಭಿಕ ಮುನ್ನಡೆ ಸಾಧಿಸಿದ್ದ ನಿಖಿಲ್ ಆರು-ಏಳು ಸುತ್ತಿನಲ್ಲಿ ಹಿನ್ನಡೆ ಸಾಧಿಸಿದ್ದಾರೆ.
ಸಿ.ಪಿ ಯೋಗೇಶ್ವರ್ ಭಾರಿ ಅಂತರದ ಮುನ್ನಡೆಯಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಹಾಗೂ ಯೋಗೇಶ್ವರ್ ಅವರಿಗೆ ಜಯಗೋಷ ಕೂಗಿ ಸಂಭ್ರಮಿಸುತ್ತಿದ್ದಾರೆ.
ಶಿಗ್ಗಾವಿಯಲ್ಲಿಯೂ ಕಾಂಗ್ರೆಸ್ ಭಾರಿ ಮುನ್ನಡೆಯಲ್ಲಿದ್ದು, ಬಿಜೆಪಿಯ ಭರತ್ ಬೊಮ್ಮಾಯಿ 55,285 ಹಾಗೂ ಕಾಂಗ್ರೆಸ್ನ ಯಾಸೀರ್ ಅಹಮದ್ ಖಾನ್ ಪಠಾಣ ಅವರು 68,078 ಮತ ಪಡೆದು 12,793 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.
ಇನ್ನೂ ಸಂಡೂರಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದು, ಒಟ್ಟು 19 ಸುತ್ತಿನ ಮತ ಎಣಿಕೆಯಲ್ಲಿ ಈವರೆಗೆ 10ಸುತ್ತುಗಳು ಮುಕ್ತಾಯಗೊಂಡಿವೆ. ಹತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 3,488ಮತಗಳಿಂದ ಮುಂದಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…