ರಾಜ್ಯ

ಜಿಟಿಡಿಗೆ ಶಾಕ್‌ : ಜೆಡಿಎಸ್‌ ಕೋರ್ ಕಮಿಟಿಯಿಂದ ಜಿ.ಟಿ ದೇವೇಗೌಡ ಔಟ್‌

ಬೆಂಗಳೂರು : ಜೆಡಿಎಸ್‌ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ.

ಜಿ.ಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ: ಕೈದಿಗಳಿಗೆ ರಾಜಾತಿಥ್ಯ : ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆತಂಡ

ಜಿ.ಟಿ ದೇವೇಗೌಡರು ಕೋರ್ ಕಮಿಟಿ ಅಧ್ಯಕ್ಷ ಆಗಿದ್ದರೂ ಯಾವುದೇ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೇ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಮಾತನಾಡುತ್ತಿದ್ದರು. ಅಂತಿಮವಾಗಿ ಜಿ.ಟಿ ದೇವೇಗೌಡರನ್ನು ಬಿಟ್ಟು ಕೃಷ್ಣಾರೆಡ್ಡಿಗೆ ಜೆಡಿಎಸ್ ವರಿಷ್ಠರು ಸ್ಥಾನ ನೀಡಿದ್ದಾರೆ. ಕೋರ್ ಕಮಿಟಿ ಜೊತೆ ಜೆಡಿಎಸ್ ರಾಜಕೀಯ ವ್ಯವಹಾರಗಳ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಪಾಲನ ಸಮಿತಿಗಳಿಗೂ ಅಧ್ಯಕ್ಷರು, ಸದಸ್ಯರನ್ನ ನೇಮಕ ಮಾಡಲಾಗಿದೆ. ರಾಜಕೀಯ ವ್ಯವಹಾರ ಸಮಿತಿಗೆ ಕುಮಾರಸ್ವಾಮಿ ಅವರನ್ನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿಗೆ ವೈ.ಎಸ್.ವಿ. ದತ್ತಾ, ಶಿಸ್ತುಪಾಲನ ಸಮಿತಿಗೆ ಮಾಜಿ ಸಚಿವ ನಾಗರಾಜಯ್ಯ ಅವರನ್ನ ನೇಮಕ ಮಾಡಲಾಗಿದೆ20 ಸದಸ್ಯರು ಒಳಗೊಂಡ ಕೋರ್ ಕಮಿಟಿ, 16 ಸದಸ್ಯರು ಒಳಗೊಂಡ ಪ್ರಚಾರ ಸಮಿತಿ ರಚನೆ ಮಾಡಿದ್ದು, ಹಾಲಿ,ಮಾಜಿ ಶಾಸಕರು,ಸಚಿವರು, ಪಕ್ಷದ ಹಿರಿಯ ನಾಯಕರಿಗೆ ಕಮಿಟಿಗಳಲ್ಲಿ ಸ್ಥಾನ ನೀಡಲಾಗಿದೆ.

ಹೆಚ್‌ಡಿ ರೇವಣ್ಣಗೆ ಕೋರ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ. ಪ್ರಚಾರ ಸಮಿತಿಯಲ್ಲಿ ಸೂರಜ್ ರೇವಣ್ಣಗೆ ಸ್ಥಾನ ಕೊಟ್ಟರೆ ಜಿ.ಟಿ ದೇವೇಗೌಡ ಪುತ್ರ ಹರೀಶ್ ಗೌಡಗೆ ಪ್ರಚಾರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

32 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

59 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago