gt devegowda
ಬೆಂಗಳೂರು : ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರಿಗೆ ಕೊನೆಗೂ ಜೆಡಿಎಸ್ ಶಾಕ್ ಕೊಟ್ಟಿದೆ.
ಜಿ.ಟಿ ದೇವೇಗೌಡರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಕೊಕ್ ನೀಡಲಾಗಿದೆ. ನೂತನ ಕೋರ್ ಕಮಿಟಿ ಅಧ್ಯಕ್ಷರಾಗಿ ಮಾಜಿ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಕೈದಿಗಳಿಗೆ ರಾಜಾತಿಥ್ಯ : ಜೈಲಿನ ಮೂವರು ಹಿರಿಯ ಅಧಿಕಾರಿಗಳ ತಲೆತಂಡ
ಜಿ.ಟಿ ದೇವೇಗೌಡರು ಕೋರ್ ಕಮಿಟಿ ಅಧ್ಯಕ್ಷ ಆಗಿದ್ದರೂ ಯಾವುದೇ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಅಲ್ಲದೇ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಮಾತನಾಡುತ್ತಿದ್ದರು. ಅಂತಿಮವಾಗಿ ಜಿ.ಟಿ ದೇವೇಗೌಡರನ್ನು ಬಿಟ್ಟು ಕೃಷ್ಣಾರೆಡ್ಡಿಗೆ ಜೆಡಿಎಸ್ ವರಿಷ್ಠರು ಸ್ಥಾನ ನೀಡಿದ್ದಾರೆ. ಕೋರ್ ಕಮಿಟಿ ಜೊತೆ ಜೆಡಿಎಸ್ ರಾಜಕೀಯ ವ್ಯವಹಾರಗಳ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಪಾಲನ ಸಮಿತಿಗಳಿಗೂ ಅಧ್ಯಕ್ಷರು, ಸದಸ್ಯರನ್ನ ನೇಮಕ ಮಾಡಲಾಗಿದೆ. ರಾಜಕೀಯ ವ್ಯವಹಾರ ಸಮಿತಿಗೆ ಕುಮಾರಸ್ವಾಮಿ ಅವರನ್ನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿಗೆ ವೈ.ಎಸ್.ವಿ. ದತ್ತಾ, ಶಿಸ್ತುಪಾಲನ ಸಮಿತಿಗೆ ಮಾಜಿ ಸಚಿವ ನಾಗರಾಜಯ್ಯ ಅವರನ್ನ ನೇಮಕ ಮಾಡಲಾಗಿದೆ20 ಸದಸ್ಯರು ಒಳಗೊಂಡ ಕೋರ್ ಕಮಿಟಿ, 16 ಸದಸ್ಯರು ಒಳಗೊಂಡ ಪ್ರಚಾರ ಸಮಿತಿ ರಚನೆ ಮಾಡಿದ್ದು, ಹಾಲಿ,ಮಾಜಿ ಶಾಸಕರು,ಸಚಿವರು, ಪಕ್ಷದ ಹಿರಿಯ ನಾಯಕರಿಗೆ ಕಮಿಟಿಗಳಲ್ಲಿ ಸ್ಥಾನ ನೀಡಲಾಗಿದೆ.
ಹೆಚ್ಡಿ ರೇವಣ್ಣಗೆ ಕೋರ್ ಕಮಿಟಿಯಲ್ಲಿ ಸ್ಥಾನ ನೀಡಲಾಗಿದೆ. ಪ್ರಚಾರ ಸಮಿತಿಯಲ್ಲಿ ಸೂರಜ್ ರೇವಣ್ಣಗೆ ಸ್ಥಾನ ಕೊಟ್ಟರೆ ಜಿ.ಟಿ ದೇವೇಗೌಡ ಪುತ್ರ ಹರೀಶ್ ಗೌಡಗೆ ಪ್ರಚಾರ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…