ಬೆಂಗಳೂರು: ತಡರಾತ್ರಿ ಕಿಡಿಗೇಡಿಗಳು ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.
ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ಕಿರಾತಕರು ಪರಾರಿಯಾಗಿದ್ದು, ಇಂದು ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜಪೇಟೆಯ ಕರ್ಣ ಎಂಬುವವರಿಗೆ ಸೇರಿದ ಹಸುಗಳ ಮೇಲೆ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಒಟ್ಟು 8 ಹಸುಗಳನ್ನು ಸಾಕಿರುವ ಕರ್ಣ ಪ್ರತಿ ದಿನ ಅವುಗಳನ್ನು ಆರೈಕೆ ಮಾಡುತ್ತಾರೆ. ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗುತ್ತದೆ. ಹೀಗೆ ನಿನ್ನೆ ಮಲಗಿದ್ದ ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದಿದ್ದಾರೆ.
ಮಾಹಿತಿ ತಿಳಿದು ಇಂದು ಬೆಳಿಗ್ಗೆ ಕಾಟನ್ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಘಟನಾ ಸ್ಥಳಕ್ಕೆ ಸಂಸದ ಪಿ.ಸಿ.ಮೋಹನ್ ಕೂಡ ಭೇಟಿ ನೀಡಿ ಕರ್ಣ ಅವರ ಕುಟುಂಬಕ್ಕೆ ಸಮಾಧಾನ ಹೇಳಿದ್ದಾರೆ.
ಇನ್ನು ಮೂಕ ಪ್ರಾಣಿಗಳ ಕೆಚ್ಚಲು ಕೊಯ್ದ ಘಟನೆ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…