ರಾಜ್ಯ

ಸುಪ್ರೀಂಕೋರ್ಟ್ ಸಿಜೆಐ ಮೇಲೆ ಚಪ್ಪಲಿ ಎಸೆತ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ ಒಪ್ಪಿಕೊಳ್ಳಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಘಟನೆಗೆ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಖಂಡನಾ ಪ್ರತಿಕ್ರಿಯೆಗಳು ವ್ಯಕ್ತವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ : ಓದುಗರ ಪತ್ರ: ಸಿಜೆಐ ಮೇಲೆ ಶೂ ಎಸೆತ ಹೇಯ ಕೃತ್ಯ

ನಾನು ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಯಸುವುದಿಲ್ಲ. ಆದರೆ, ಅತ್ಯಂತ ನೋವಿನಿಂದ ಹೇಳುತ್ತಿದ್ದೇನೆ. ಇಂತಹ ವಿಚಾರಧಾರೆಗಳನ್ನು ಹಾಗೂ ಸಮಾಜದಲ್ಲಿನ ಮಾನಸಿಕ ಸ್ಥಿತಿಗಳನ್ನು ಬೆಳೆಸುತ್ತಿರುವ ಸಂಘಟನೆಗಳನ್ನು ಖಂಡಿಸಬೇಕಿದೆ ಮತ್ತು ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಈವರೆಗೂ ಇಂತಹ ಅವಮಾನ ಆಗಿರಲಿಲ್ಲ. ಧರ್ಮದ ಹೆಸರಿನಲ್ಲಿ ಹಾಗೂ ವಿಶೇಷ ವಿಚಾರಧಾರೆಯ ವ್ಯಕ್ತಿ ಮಾಡಿರುವ ಕೃತ್ಯ ಖಂಡನೀಯ. ಕಾಂಗ್ರೆಸ್‌‍ ಪಕ್ಷ ಈಗಾಗಲೇ ತನ್ನ ಆಕ್ಷೇಪವನ್ನು ತಿಳಿಸಿದೆ. ತಾವು ಕೂಡ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದರು.

ಈ ಘಟನೆಗೆ ಪ್ರಗತಿಪರ ಆಲೋಚನೆಯಿರುವ ವ್ಯಕ್ತಿಗಳು, ವಕೀಲರು, ಸರ್ಕಾರಗಳಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ರಾಜಕೀಯ ಪಕ್ಷಗಳು, ಸರ್ಕಾರಗಳು, ವಕೀಲರು ಹಾಗೂ ಸಮಾಜ ಪ್ರತಿಕ್ರಿಯಿಸಿಲ್ಲ. ಯಾರೂ ಕೂಡ ಇಂತಹದನ್ನು ಸಹಿಸಬಾರದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

10 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

11 hours ago