ರಾಜ್ಯ

ಸುಪ್ರೀಂಕೋರ್ಟ್ ಸಿಜೆಐ ಮೇಲೆ ಚಪ್ಪಲಿ ಎಸೆತ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ಬೆಂಗಳೂರು: ವಿಚಾರಧಾರೆಗೆ ತೊಂದರೆಯಾಗಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರ ಮೇಲೆ ಚಪ್ಪಲಿ ತೂರುವುದಾದರೆ, ಸಾವಿರಾರು ವರ್ಷಗಳಿಂದ ತೊಂದರೆಗೆ ಒಳಗಾದವರು, ಅವಮಾನಕ್ಕೆ ಸಿಲುಕಿದವರು ಇಂತಹ ವ್ಯವಸ್ಥೆಯನ್ನು ಹೇಗೆ ಒಪ್ಪಿಕೊಳ್ಳಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಘಟನೆಗೆ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಖಂಡನಾ ಪ್ರತಿಕ್ರಿಯೆಗಳು ವ್ಯಕ್ತವಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನು ಓದಿ : ಓದುಗರ ಪತ್ರ: ಸಿಜೆಐ ಮೇಲೆ ಶೂ ಎಸೆತ ಹೇಯ ಕೃತ್ಯ

ನಾನು ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಯಸುವುದಿಲ್ಲ. ಆದರೆ, ಅತ್ಯಂತ ನೋವಿನಿಂದ ಹೇಳುತ್ತಿದ್ದೇನೆ. ಇಂತಹ ವಿಚಾರಧಾರೆಗಳನ್ನು ಹಾಗೂ ಸಮಾಜದಲ್ಲಿನ ಮಾನಸಿಕ ಸ್ಥಿತಿಗಳನ್ನು ಬೆಳೆಸುತ್ತಿರುವ ಸಂಘಟನೆಗಳನ್ನು ಖಂಡಿಸಬೇಕಿದೆ ಮತ್ತು ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಆಗ್ರಹಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಈವರೆಗೂ ಇಂತಹ ಅವಮಾನ ಆಗಿರಲಿಲ್ಲ. ಧರ್ಮದ ಹೆಸರಿನಲ್ಲಿ ಹಾಗೂ ವಿಶೇಷ ವಿಚಾರಧಾರೆಯ ವ್ಯಕ್ತಿ ಮಾಡಿರುವ ಕೃತ್ಯ ಖಂಡನೀಯ. ಕಾಂಗ್ರೆಸ್‌‍ ಪಕ್ಷ ಈಗಾಗಲೇ ತನ್ನ ಆಕ್ಷೇಪವನ್ನು ತಿಳಿಸಿದೆ. ತಾವು ಕೂಡ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದರು.

ಈ ಘಟನೆಗೆ ಪ್ರಗತಿಪರ ಆಲೋಚನೆಯಿರುವ ವ್ಯಕ್ತಿಗಳು, ವಕೀಲರು, ಸರ್ಕಾರಗಳಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ರಾಜಕೀಯ ಪಕ್ಷಗಳು, ಸರ್ಕಾರಗಳು, ವಕೀಲರು ಹಾಗೂ ಸಮಾಜ ಪ್ರತಿಕ್ರಿಯಿಸಿಲ್ಲ. ಯಾರೂ ಕೂಡ ಇಂತಹದನ್ನು ಸಹಿಸಬಾರದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

3 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

3 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

3 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

3 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

3 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

3 hours ago