ರಾಜ್ಯ

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆ: ಆತಂಕದಲ್ಲಿ ರೈತರು

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗಲಿದೆ. ಆ ಮೂಲಕ ರಾಜ್ಯದಲ್ಲಿ ಬರದ ಭೀತಿ ಕಾಡಲು ಆರಂಭವಾಗಿದೆ.

ರಾಜ್ಯದಲ್ಲಿ ಏಪ್ರಿಲ್‍ನಿಂದ ಜೂನ್ ಅವಧಿಗೆ ಬಿಸಿಗಾಳಿಯ ದಿನಗಳ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಂದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡುಬರುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಕೊಪ್ಪಳ, ವಿಜಯನಗರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಜೂನ್ ವರೆಗೆ ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ಉಳಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಬಿಸಿಗಾಳಿ ದಿನಗಳು ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಅಲ್ಲಲ್ಲಿ ಹೆಚ್ಚಿನ ತಾಪಮಾನ ಮತ್ತು ಬಿಸಿಗಾಳಿ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೇಸಿಗೆಯಲ್ಲಿ ಕೃಷಿ ಬಿತ್ತನೆಯಲ್ಲಿ ಕುಸಿತ: ಇತ್ತ ಮಳೆಯ ಕೊರತೆ ಮಧ್ಯೆ ಬಿಸಿಗಾಳಿಯ ಮಧ್ಯೆ ರಾಜ್ಯ ಮಾರ್ಚ್ ಅಂತ್ಯದ ವರೆಗೆ ಬೇಸಿಗೆ ಋತುವಿನಲ್ಲಿ ಬಿತ್ತನೆ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ವಾಡಿಕೆ ಬಿತ್ತನೆ ಸಾಧ್ಯವಾಗದೆ ಕುಸಿತ ಕಂಡು ಬಂದಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ಇನ್ನು ಈ ಬಾರಿ ಮುಂಗಾರು ಮಳೆ ಕೊರತೆ ಎದುರಾಗುವ ಎಲ್ಲಾ ಸಾಧ್ಯತೆಯಿದ್ದು, ರೈತರು ಭಾರೀ ಆತಂಕದಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

19 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

19 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

19 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

19 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

20 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

20 hours ago