ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಮಾರ್ಚ್.31) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರಿಗೆ ನನ್ನದು ಪರೋಕ್ಷ ಬೆಂಬಲ ಇದೆಯೆಂದು ಅಲ್ಲ. ಅವರ ಬಗ್ಗೆ ನಮ್ಮ ಹೈಕಮಾಂಡ್ ನಿರ್ಧಾರಿಸಿ ಉಚ್ಚಾಟನೆ ಮಾಡಿದೆ. ಹೀಗಾಗಿ ನಾವು ಹೈಕಮಾಂಡ್ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತದೆ. ಹೀಗಾಗಿ ಯತ್ನಾಳ್ ಪಕ್ಷದಿಂದ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಈ ಹಿಂದೆ ಉಮಾಭಾರತಿ ಎಂಬುವವರು ಸಹ ಪಕ್ಷದಿಂದ ಉಚ್ಛಾಟನೆಗೊಂಡು ಆರು ವರ್ಷಗಳ ನಂತರ ಪಕ್ಷಕ್ಕೆ ಮರಳಿದರು. ಆದರೆ ಮತ್ತೊಮ್ಮೆ ಪಕ್ಷಕ್ಕೆ ಸೇರುವಾಗ ಅವರು ಸುಸ್ತಾಗಿ ಹೋಗಿದ್ದರು. ಅವರಂತೆಯೇ ಯತ್ನಾಳ್ ಅವರಿಗೂ ಆಗಬಾರದು ಎಂಬ ಭಾವನೆ ಇದೆ ಅಷ್ಟೇ ಎಂದರು.
ದೇಶ ಮತ್ತು ಪಕ್ಷದ ಪರವಾಗಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…