ಬೆಂಗಳೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವುದು ನಮ್ಮ ಹೈಕಮಾಂಡ್. ಹಾಗಾಗಿ ಅವರ ಬಗ್ಗೆ ಪಕ್ಷ ನಿರ್ಧಾರ ಮಾಡಲಿದ್ದು, ಹೈಕಮಾಂಡ್ ತೀರ್ಮಾನವನ್ನು ಸರಿ ಅಥವಾ ತಪ್ಪೆಂದು ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಇಂದು(ಮಾರ್ಚ್.31) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರಿಗೆ ನನ್ನದು ಪರೋಕ್ಷ ಬೆಂಬಲ ಇದೆಯೆಂದು ಅಲ್ಲ. ಅವರ ಬಗ್ಗೆ ನಮ್ಮ ಹೈಕಮಾಂಡ್ ನಿರ್ಧಾರಿಸಿ ಉಚ್ಚಾಟನೆ ಮಾಡಿದೆ. ಹೀಗಾಗಿ ನಾವು ಹೈಕಮಾಂಡ್ ತೀರ್ಮಾನದ ಬಗ್ಗೆ ಮಾತನಾಡುವುದಿಲ್ಲ. ಆದರೆ ಪಕ್ಷ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತದೆ. ಹೀಗಾಗಿ ಯತ್ನಾಳ್ ಪಕ್ಷದಿಂದ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಈ ಹಿಂದೆ ಉಮಾಭಾರತಿ ಎಂಬುವವರು ಸಹ ಪಕ್ಷದಿಂದ ಉಚ್ಛಾಟನೆಗೊಂಡು ಆರು ವರ್ಷಗಳ ನಂತರ ಪಕ್ಷಕ್ಕೆ ಮರಳಿದರು. ಆದರೆ ಮತ್ತೊಮ್ಮೆ ಪಕ್ಷಕ್ಕೆ ಸೇರುವಾಗ ಅವರು ಸುಸ್ತಾಗಿ ಹೋಗಿದ್ದರು. ಅವರಂತೆಯೇ ಯತ್ನಾಳ್ ಅವರಿಗೂ ಆಗಬಾರದು ಎಂಬ ಭಾವನೆ ಇದೆ ಅಷ್ಟೇ ಎಂದರು.
ದೇಶ ಮತ್ತು ಪಕ್ಷದ ಪರವಾಗಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ನಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂಬುದೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…